‘ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ರಂಜಿತ್,ಜ್ಞಾನಸಾಗರ ಅವರ ಮುಖಕ್ಕೆ ಗುದ್ದಿದ್ದ. ಕೆಳಗೆ ಬಿದ್ದ ಅವರ ತಲೆಯನ್ನು ನೆಲಕ್ಕೆ ಬಡಿದಿದ್ದ. ತೀವ್ರ ರಕ್ತಸ್ರಾವದಿಂದಾಗಿ ಜ್ಞಾನಸಾಗರ ಸ್ಥಳದಲ್ಲೇ ಮೃತಪಟ್ಟಿದ್ದರು. ಅದೇ ರಸ್ತೆಯಲ್ಲಿ ಹೊರಟಿದ್ದ ಸ್ಥಳೀಯರು, ದೃಶ್ಯ ನೋಡಿ ಗಾಬರಿಗೊಂಡಿದ್ದರು. ಅವರೇ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಘಟನೆ ಬಗ್ಗೆ ಅವರಿಂದಲೇ ಹೇಳಿಕೆ ಪಡೆಯಲಾಗಿದೆ’ ಎಂದರು.