<p>ಜಯನಗರ ವಿಧಾನಸಭಾ ಕ್ಷೇತ್ರದ ಭೈರಸಂದ್ರ ವಾರ್ಡಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಆಟದ ಮೈದಾನ ಪಕ್ಕದಲ್ಲಿ ನಿರ್ಮಿಸಿರುವ ಸ್ವಯಂಚಾಲಿತ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಮತ್ತು ಶಾಸಕಿ ಆರ್. ಸೌಮ್ಯಾ ರೆಡ್ಡಿ, ಪಾಲಿಕೆ ಸದಸ್ಯರಾದ ಎನ್.ನಾಗರಾಜ್ ಚಾಲನೆ ನೀಡಿದರು.</p>.<p>ಇದೇ ಸಂದರ್ಭದಲ್ಲಿ 500 ಬಿಪಿಎಲ್ ಕಾರ್ಡ್ದಾರರಿಗೆ ಎಟಿಎಂ ಮಾದರಿ ಕಾರ್ಡ್ಗಳನ್ನು ವಿತರಿಸಲಾಯಿತು. ಈ ಕಾರ್ಡ್ ಹೊಂದಿರುವವರ ಪ್ರತಿದಿನ 25ಲೀಟರ್ ಶುದ್ಧ ನೀರು ಪಡೆಯಬಹುದು. ಕಾರ್ಡ್ ಸ್ವೈಪ್ ಮಾಡಿ ನೀರು ತೆಗೆದುಕೊಂಡು ಹೋಗಬಹುದು. ನೀರಿನ ಕ್ಯಾನ್ಗಳನ್ನು ಸಹ ವಿತರಿಸಲಾಯಿತು. ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10ರವರೆಗೆ ಘಟಕ ತೆರೆದಿರುತ್ತದೆ.</p>.<p>‘ಬೆಂಗಳೂರಿನಲ್ಲಿ ಶುದ್ಧ ನೀರು ಸಿಗುವುದೇ ಕಷ್ಟವಾಗಿದೆ. ಹೆಚ್ಚಿನ ಕಾಯಿಲೆಗಳು ನೀರಿನಿಂದಲೇ ಹರಡುತ್ತವೆ. ಶುದ್ಧ ನೀರನ್ನು ಕೊಟ್ಟರೆ ಕಾಯಿಲೆಗಳನ್ನೂ ತಡೆಗಟ್ಟುವುದು ಸುಲಭ. ಸಿಬ್ಬಂದಿ ನೇಮಿಸುವ ಬದಲು ಈ ರೀತಿಯ ಸ್ವಯಂಚಾಲಿತ ಘಟಕಗಳು ಇದ್ದರೆ ಎಲ್ಲರಿಗೂ ಅನುಕೂಲ. ಇಲ್ಲಿನ ಕೊಳೆಗೇರಿ ನಿವಾಸಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಈ ಘಟಕ ನೆರವಾಗಲಿದೆ’ ಎಂದು ಮೇಯರ್ ಹೇಳಿದರು.</p>.<p>‘ಕ್ಷೇತ್ರದಲ್ಲಿ ಇದು ಎರಡನೇ ಘಟಕವಾಗಿದೆ. ವಾರ್ಡಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊಳೆಗೇರಿ ನಿವಾಸಿಗಳು ವಾಸಿಸುತ್ತಾರೆ. ಇವರನ್ನು ಗಮನದಲ್ಲಿಟ್ಟುಕೊಂಡು ಘಟಕ ಆರಂಭಿಸಲಾಗಿದೆ. ಮಧ್ಯಮ ವರ್ಗದ ಜನರಿಗೆ ಕೂಡ ಶುದ್ಧ ನೀರು ದೊರೆಯುತ್ತಿಲ್ಲ. ಎಲ್ಲರಿಗೂ ಶುದ್ಧ ನೀರು ಸಿಗಬೇಕು ಎಂಬುದು ನಮ್ಮ ಉದ್ದೇಶ. ₹ 600 ನೀಡಿ ಕಾರ್ಡುಗಳನ್ನು ಪಡೆಯಬಹುದು. ಮತ್ತೆ ಕಾರ್ಡುಗಳನ್ನು<br />ರೀ ಚಾರ್ಜ್ ಮಾಡಿಕೊಳ್ಳಬಹುದು’ ಎಂದು ಪಾಲಿಕೆ ಸದಸ್ಯ ಎನ್. ನಾಗರಾಜು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಯನಗರ ವಿಧಾನಸಭಾ ಕ್ಷೇತ್ರದ ಭೈರಸಂದ್ರ ವಾರ್ಡಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಆಟದ ಮೈದಾನ ಪಕ್ಕದಲ್ಲಿ ನಿರ್ಮಿಸಿರುವ ಸ್ವಯಂಚಾಲಿತ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ ಮತ್ತು ಶಾಸಕಿ ಆರ್. ಸೌಮ್ಯಾ ರೆಡ್ಡಿ, ಪಾಲಿಕೆ ಸದಸ್ಯರಾದ ಎನ್.ನಾಗರಾಜ್ ಚಾಲನೆ ನೀಡಿದರು.</p>.<p>ಇದೇ ಸಂದರ್ಭದಲ್ಲಿ 500 ಬಿಪಿಎಲ್ ಕಾರ್ಡ್ದಾರರಿಗೆ ಎಟಿಎಂ ಮಾದರಿ ಕಾರ್ಡ್ಗಳನ್ನು ವಿತರಿಸಲಾಯಿತು. ಈ ಕಾರ್ಡ್ ಹೊಂದಿರುವವರ ಪ್ರತಿದಿನ 25ಲೀಟರ್ ಶುದ್ಧ ನೀರು ಪಡೆಯಬಹುದು. ಕಾರ್ಡ್ ಸ್ವೈಪ್ ಮಾಡಿ ನೀರು ತೆಗೆದುಕೊಂಡು ಹೋಗಬಹುದು. ನೀರಿನ ಕ್ಯಾನ್ಗಳನ್ನು ಸಹ ವಿತರಿಸಲಾಯಿತು. ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10ರವರೆಗೆ ಘಟಕ ತೆರೆದಿರುತ್ತದೆ.</p>.<p>‘ಬೆಂಗಳೂರಿನಲ್ಲಿ ಶುದ್ಧ ನೀರು ಸಿಗುವುದೇ ಕಷ್ಟವಾಗಿದೆ. ಹೆಚ್ಚಿನ ಕಾಯಿಲೆಗಳು ನೀರಿನಿಂದಲೇ ಹರಡುತ್ತವೆ. ಶುದ್ಧ ನೀರನ್ನು ಕೊಟ್ಟರೆ ಕಾಯಿಲೆಗಳನ್ನೂ ತಡೆಗಟ್ಟುವುದು ಸುಲಭ. ಸಿಬ್ಬಂದಿ ನೇಮಿಸುವ ಬದಲು ಈ ರೀತಿಯ ಸ್ವಯಂಚಾಲಿತ ಘಟಕಗಳು ಇದ್ದರೆ ಎಲ್ಲರಿಗೂ ಅನುಕೂಲ. ಇಲ್ಲಿನ ಕೊಳೆಗೇರಿ ನಿವಾಸಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಈ ಘಟಕ ನೆರವಾಗಲಿದೆ’ ಎಂದು ಮೇಯರ್ ಹೇಳಿದರು.</p>.<p>‘ಕ್ಷೇತ್ರದಲ್ಲಿ ಇದು ಎರಡನೇ ಘಟಕವಾಗಿದೆ. ವಾರ್ಡಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊಳೆಗೇರಿ ನಿವಾಸಿಗಳು ವಾಸಿಸುತ್ತಾರೆ. ಇವರನ್ನು ಗಮನದಲ್ಲಿಟ್ಟುಕೊಂಡು ಘಟಕ ಆರಂಭಿಸಲಾಗಿದೆ. ಮಧ್ಯಮ ವರ್ಗದ ಜನರಿಗೆ ಕೂಡ ಶುದ್ಧ ನೀರು ದೊರೆಯುತ್ತಿಲ್ಲ. ಎಲ್ಲರಿಗೂ ಶುದ್ಧ ನೀರು ಸಿಗಬೇಕು ಎಂಬುದು ನಮ್ಮ ಉದ್ದೇಶ. ₹ 600 ನೀಡಿ ಕಾರ್ಡುಗಳನ್ನು ಪಡೆಯಬಹುದು. ಮತ್ತೆ ಕಾರ್ಡುಗಳನ್ನು<br />ರೀ ಚಾರ್ಜ್ ಮಾಡಿಕೊಳ್ಳಬಹುದು’ ಎಂದು ಪಾಲಿಕೆ ಸದಸ್ಯ ಎನ್. ನಾಗರಾಜು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>