ಒಂದೆಡೆ ಅಂತರ್ಜಲ ಮಟ್ಟ ಕುಸಿತದಿಂದ ಬೋರ್ವೆಲ್ಗಳು ಬತ್ತಿ ಹೋಗುತ್ತಿದ್ದರೆ, ಇನ್ನೊಂದೆಡೆ ಕಾವೇರಿ ನೀರಿನ ಕೊರತೆಯಿಂದಾಗಿ ಮತ್ತು ಬಲ್ಕ್ ಫ್ಲೋ ಮೀಟರ್ ಅಳವಡಿಸುವ ಕಾರ್ಯ ನಡೆಯುತ್ತಿರುವುದರಿಂದ ಬೆಂಗಳೂರು ಜಲಮಂಡಳಿಯಿಂದ ನಗರದಲ್ಲಿರುವ ಮನೆಗಳಿಗೆ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ. ಹಾಗಾಗಿ ಜನರು ಟ್ಯಾಂಕರ್ ನೀರು ಬಳಸಲು ಮುಂದಾಗಿದ್ದಾರೆ ಆದರೆ ಅದೂ ಕೂಡ ದುಬಾರಿಯಾಗಿದ್ದು, ಜಲಮಂಡಳಿಗೂ ನೀರಿನ ತೆರಿಗೆ ಕಟ್ಟಬೇಕು ಇತ್ತ ಟ್ಯಾಂಕರ್ಗೂ ಹಣ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.