ಇದೇ ವೇಳೆ ಮಾತನಾಡಿದ ಅವರು, ’ಮಳೆಗಾಲದಲ್ಲಿ ರಾಜಕಾಲುವೆಯಲ್ಲಿ ಹರಿಯುವ ನೀರಿನ ಪ್ರಮಾಣ ಹೆಚ್ಚಾಗಿ ಸುತ್ತಮುತ್ತಲ ಪ್ರದೇಶದ ಜನರು ತೊಂದರೆಗೀಡಾಗುವ ಸಾಧ್ಯತೆ ಇತ್ತು. ಹೀಗಾಗಿ ₹9.3 ಕೋಟಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಕಾಮಗಾರಿ ಪೂರ್ಣಗೊಂಡ ನಂತರ ಮನೆಗಳಿಗೆ ನೀರು ನುಗ್ಗುವ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಲಿದೆ‘ ಎಂದು ಹೇಳಿದರು.