ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಇದೇ ಮೊದಲ ಬಾರಿಗೆ ಇ–ಕಚೇರಿ ಆರಂಭಿಸಲಾಗಿದೆ. ಸಾರ್ವಜನಿಕರು ಕಂದಾಯ ಇಲಾಖೆಯ ವಿವಿಧ ವಿಭಾಗಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪಡೆಯಲು ಇಲ್ಲಿ ಅರ್ಜಿ ಮತ್ತು ದೂರುಗಳನ್ನು ಸಲ್ಲಿಸಬಹುದು. ಈ ಅರ್ಜಿಗಳನ್ನು ಸ್ಕ್ಯಾನ್ಮಾಡಿ ಸಂಬಂಧಟ್ಟ ಇಲಾಖೆಗಳಿಗೆ ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಮನೆಯಲ್ಲಿ ಕುಳಿತು ಮೊಬೈಲ್ನಲ್ಲೇ ಅರ್ಜಿ ಯಾವ ಹಂತದಲ್ಲಿದೆ ಎಂಬುದನ್ನು ನೋಡಬಹುದು ಎಂದು ತಿಳಿಸಿದರು.
ಸಾರ್ವಜನಿಕರು ತಾಲ್ಲೂಕು ಕಚೇರಿಗೆ ಅಲೆಯುವುದನ್ನು ತಪ್ಪಿಸುವುದಕ್ಕಾಗಿ ಇ–ಕಚೇರಿ ಆರಂಭಿಸಲಾಗಿದೆ. ಕಂದಾಯ ಇಲಾಖೆಯ ಕೆಲಸಗಳನ್ನು ಸರಳೀಕರಣಗೊಳಿಸುವುದರ ಜೊತೆಗೆ ಕಡತಗಳನ್ನು ಶೀಘ್ರ ವಿಲೇವಾರಿ ಮಾಡುವುದು ಇದರ ಮುಖ್ಯ ಉದ್ದೇಶ ಎಂದು ವಿವರಿಸಿದರು.
ತಹಶೀಲ್ದಾರ್ ಅನಿಲ್ಕುಮಾರ್ ಆರೋಲಿಕರ್, ವಿಶೇಷ ತಹಶೀಲ್ದಾರ್ ಶಿವಕುಮಾರ್, ಬೆಂಗಳೂರು ಉತ್ತರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ.ಒ. ರಮೇಶ್ ಉಪಸ್ಥಿತರಿದ್ದರು.