<p><strong>ಚನ್ನಪಟ್ಟಣ:</strong> ಬೆಂಗಳೂರಿನಿಂದ ಓಲಾ ಕ್ಯಾಬ್ ಬಾಡಿಗೆಗೆ ಪಡೆದು ಶನಿವಾರ ಚನ್ನಪಟ್ಟಣಕ್ಕೆ ಕರೆತಂದು ಕ್ಯಾಬ್ ಚಾಲಕನನ್ನು ಬೆದರಿಸಿ ₹20 ಸಾವಿರ ದರೋಡೆ ಮಾಡಲಾಗಿದೆ.</p>.<p>ಶುಕ್ರವಾರ ರಾತ್ರಿ ಬೆಂಗಳೂರಿನ ಆಡುಗೋಡಿಯಿಂದ ದೊಮ್ಮಸಂದ್ರಕ್ಕೆ ನಾಲ್ಕು ಮಂದಿ ದರೋಡೆಕೋರರು ಕ್ಯಾಬ್ ಬುಕ್ ಮಾಡಿಕೊಂಡು ಹೊರಟಿದ್ದಾರೆ.</p>.<p>ಹೊರಟ ನಂತರ ಚಾಲಕ ಸೋಮಶೇಖರ್ ಅವರನ್ನು ಚಾಕು ತೋರಿಸಿ ಬೆದರಿಸಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಸುತ್ತಾಡಿಸಿದ್ದಾರೆ. ನಂತರ ಆತನ ಬಳಿಯಿದ್ದ ಹಣವನ್ನು ಲಪಟಾಯಿಸಿದ್ದಲ್ಲದೆ ಎಟಿಎಂ ಕಾರ್ಡ್ ಕಿತ್ತುಕೊಂಡು ₹20 ಸಾವಿರ ಡ್ರಾ ಮಾಡಿಸಿ ಪಡೆದುದಾಗಿ ತಿಳಿದುಬಂದಿದೆ. ರಾತ್ರಿಪೂರ್ತಿ ಸುತ್ತಾಡಿಸಿ ಶನಿವಾರ ಬೆಳಿಗ್ಗೆ ಚನ್ನಪಟ್ಟಣಕ್ಕೆ ಕರೆತಂದಿದ್ದಾರೆ.</p>.<p>ಚನ್ನಪಟ್ಟಣದಲ್ಲಿ ವಸತಿ ಗೃಹದಲ್ಲಿ ಕೊಠಡಿ ಬಾಡಿಗೆ ಪಡೆದು ಕೊಠಡಿಗೆ ಚಾಲಕನನ್ನು ಕರೆದುಕೊಂಡು ಹೋಗಿದ್ದಾರೆ. ಆಗ ಚಾಲಕ ಸೋಮಶೇಖರ್ ಕಿಟಿಕಿಯಿಂದ ಹಾರಿ ತಪ್ಪಿಸಿಕೊಂಡಿದ್ದಾರೆ. ನಾಲ್ವರು ದರೋಡೆಕೋರರು ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಚಾಲಕ ಸೋಮಶೇಖರ್ ಪಟ್ಟಣದ ಪುರ ಪೊಲೀಸ್ ಠಾಣೆಗೆ ಹಾಜರಾಗಿ ವಿಷಯ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆಡುಗೋಡಿ ಪೊಲೀಸ್ ಠಾಣೆಗೆ ಪ್ರಕರಣವನ್ನು ವರ್ಗಾಯಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ಬೆಂಗಳೂರಿನಿಂದ ಓಲಾ ಕ್ಯಾಬ್ ಬಾಡಿಗೆಗೆ ಪಡೆದು ಶನಿವಾರ ಚನ್ನಪಟ್ಟಣಕ್ಕೆ ಕರೆತಂದು ಕ್ಯಾಬ್ ಚಾಲಕನನ್ನು ಬೆದರಿಸಿ ₹20 ಸಾವಿರ ದರೋಡೆ ಮಾಡಲಾಗಿದೆ.</p>.<p>ಶುಕ್ರವಾರ ರಾತ್ರಿ ಬೆಂಗಳೂರಿನ ಆಡುಗೋಡಿಯಿಂದ ದೊಮ್ಮಸಂದ್ರಕ್ಕೆ ನಾಲ್ಕು ಮಂದಿ ದರೋಡೆಕೋರರು ಕ್ಯಾಬ್ ಬುಕ್ ಮಾಡಿಕೊಂಡು ಹೊರಟಿದ್ದಾರೆ.</p>.<p>ಹೊರಟ ನಂತರ ಚಾಲಕ ಸೋಮಶೇಖರ್ ಅವರನ್ನು ಚಾಕು ತೋರಿಸಿ ಬೆದರಿಸಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಸುತ್ತಾಡಿಸಿದ್ದಾರೆ. ನಂತರ ಆತನ ಬಳಿಯಿದ್ದ ಹಣವನ್ನು ಲಪಟಾಯಿಸಿದ್ದಲ್ಲದೆ ಎಟಿಎಂ ಕಾರ್ಡ್ ಕಿತ್ತುಕೊಂಡು ₹20 ಸಾವಿರ ಡ್ರಾ ಮಾಡಿಸಿ ಪಡೆದುದಾಗಿ ತಿಳಿದುಬಂದಿದೆ. ರಾತ್ರಿಪೂರ್ತಿ ಸುತ್ತಾಡಿಸಿ ಶನಿವಾರ ಬೆಳಿಗ್ಗೆ ಚನ್ನಪಟ್ಟಣಕ್ಕೆ ಕರೆತಂದಿದ್ದಾರೆ.</p>.<p>ಚನ್ನಪಟ್ಟಣದಲ್ಲಿ ವಸತಿ ಗೃಹದಲ್ಲಿ ಕೊಠಡಿ ಬಾಡಿಗೆ ಪಡೆದು ಕೊಠಡಿಗೆ ಚಾಲಕನನ್ನು ಕರೆದುಕೊಂಡು ಹೋಗಿದ್ದಾರೆ. ಆಗ ಚಾಲಕ ಸೋಮಶೇಖರ್ ಕಿಟಿಕಿಯಿಂದ ಹಾರಿ ತಪ್ಪಿಸಿಕೊಂಡಿದ್ದಾರೆ. ನಾಲ್ವರು ದರೋಡೆಕೋರರು ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ಚಾಲಕ ಸೋಮಶೇಖರ್ ಪಟ್ಟಣದ ಪುರ ಪೊಲೀಸ್ ಠಾಣೆಗೆ ಹಾಜರಾಗಿ ವಿಷಯ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆಡುಗೋಡಿ ಪೊಲೀಸ್ ಠಾಣೆಗೆ ಪ್ರಕರಣವನ್ನು ವರ್ಗಾಯಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>