ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಲಕರಿಗೆ ಪರಿಹಾರ: ₹ 40 ಕೋಟಿ ಬಿಡುಗಡೆ

Last Updated 10 ಜೂನ್ 2020, 20:20 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌–19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಆಟೊರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ಪರಿಹಾರ ಧನ ನೀಡಲು ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ₹40 ಕೋಟಿ ಬಿಡುಗಡೆ ಮಾಡಿದೆ.

ಇದಕ್ಕಾಗಿ ಲೆಕ್ಕ ಶೀರ್ಷಿಕೆ ಇತರೆ ಖರ್ಚುಗಳಿಂದ ₹30.34 ಕೋಟಿ, ಪರಿಶಿಷ್ಟ ಜಾತಿ ಉಪ ಯೋಜನೆ ₹6.78 ಕೋಟಿ
ಮತ್ತು ಗಿರಿಜನ ಉಪಯೋಜನೆಯಿಂದ ₹2.88 ಕೋಟಿ ಬಳಸಲಾಗಿದೆ.

ಆಟೊ ಮತ್ತು ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ ತಲಾ ₹5,000 ನೀಡಲಾಗುವುದು. ಒಂದು ವೇಳೆ ಹೆಚ್ಚುವರಿ ಅನುದಾನದ ಅಗತ್ಯವಿದ್ದರೆ, ಸಾದಿಲ್ವಾರು ನಿಧಿಯಿಂದ ಅಥವಾ ಪೂರಕ ಅಂದಾಜು–1 ಮೂಲಕ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT