ಬೆಂಗಳೂರು: ಕೋವಿಡ್–19 ಲಾಕ್ಡೌನ್ ಹಿನ್ನೆಲೆಯಲ್ಲಿ ಆಟೊರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ಪರಿಹಾರ ಧನ ನೀಡಲು ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ₹40 ಕೋಟಿ ಬಿಡುಗಡೆ ಮಾಡಿದೆ.
ಇದಕ್ಕಾಗಿ ಲೆಕ್ಕ ಶೀರ್ಷಿಕೆ ಇತರೆ ಖರ್ಚುಗಳಿಂದ ₹30.34 ಕೋಟಿ, ಪರಿಶಿಷ್ಟ ಜಾತಿ ಉಪ ಯೋಜನೆ ₹6.78 ಕೋಟಿ ಮತ್ತು ಗಿರಿಜನ ಉಪಯೋಜನೆಯಿಂದ ₹2.88 ಕೋಟಿ ಬಳಸಲಾಗಿದೆ.
ಆಟೊ ಮತ್ತು ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ ತಲಾ ₹5,000 ನೀಡಲಾಗುವುದು. ಒಂದು ವೇಳೆ ಹೆಚ್ಚುವರಿ ಅನುದಾನದ ಅಗತ್ಯವಿದ್ದರೆ, ಸಾದಿಲ್ವಾರು ನಿಧಿಯಿಂದ ಅಥವಾ ಪೂರಕ ಅಂದಾಜು–1 ಮೂಲಕ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.