<p><strong>ಯಲಹಂಕ: </strong>‘ಕೃಷಿಯ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಬೆಳೆಗಳ ಕುರಿತು ಅಧ್ಯಯನ ಮಾಡುವುದರ ಜೊತೆಗೆ ಡ್ರೋನ್ ತಂತ್ರಜ್ಞಾನವನ್ನು ಬಳಸಿದರೆ ಸಾರ್ಥಕತೆ ಪಡೆಯಲು ಸಾಧ್ಯ’ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ.ಸುರೇಶ ಹೇಳಿದರು.</p>.<p>ಕೃಷಿ ವಿಶ್ವವಿದ್ಯಾಲಯ, ಏರೋಸೈಟ್ ಟೆಕ್ನಾಲಜೀಸ್ ಹಾಗೂ ಕ್ರಾಫ್ಲೈಫ್ ಇಂಡಿಯಾ ಆಶ್ರಯದಲ್ಲಿ ಜಿಕೆವಿಕೆಯಲ್ಲಿ ಆಯೋಜಿಸಿದ್ದ ‘ಡ್ರೋನ್ ದೀದಿ’ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕೇವಲ ಡ್ರೋನ್ ಬಳಕೆದಾರರಾಗದೆ ಕೃಷಿಯಲ್ಲಿರುವ ಮೂಲಭೂತ ವಿಷಯಗಳನ್ನು ತಿಳಿದುಕೊಂಡು ಕೃಷಿ ವಿಸ್ತರಣಾ ಕಾರ್ಯಕರ್ತರಾಗಬೇಕು. ಆಗ ಕೃಷಿಯಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಹಾಗೂ ರೈತರ ವಿಶ್ವಾಸಗಳಿಸಿ ಅವರಿಗೆ ಅಗತ್ಯವಾದ ತಾಂತ್ರಿಕ ಸಲಹೆಗಳನ್ನು ನೀಡಲು ಅನುಕೂಲವಾಗುತ್ತದೆ’ ಎಂದರು.</p>.<p><strong>ಡ್ರೋನ್ ಬಳಸುವವರಿಗೆ ಪ್ರತಿ ಹಂತದಲ್ಲೂ ಕೃಷಿಯ ಬಗ್ಗೆ ಜ್ಞಾನವಿರಬೇಕು. ಎಷ್ಟು ಎತ್ತರದಲ್ಲಿ ಹಾರಿಸಿ, ಬೆಳೆಗಳಿಗೆ ನೀರು ಮತ್ತು ಔಷಧಿಗಳನ್ನು ಸಿಂಪಡಿಸಬೇಕು. ಬೆಳೆವಾರು, ಪ್ರಮಾಣ, ಸಮಯ ಈ ಎಲ್ಲ ಅಂಶಗಳ ಬಗ್ಗೆ ತಿಳಿದುಕೊಂಡು ಸಿಂಪಡಣೆ ಕಾರ್ಯ ಕೈಗೊಳ್ಳಬೇಕಾದುದು ಅತಿಮುಖ್ಯ ಎಂದು ತಿಳಿಸಿದರು.</strong></p>.<p>ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಶಿವಕುಮಾರ್ ಮಾತನಾಡಿ, ‘ಭೂಮಿಗೆ ಬಳಸುತ್ತಿರುವ ರಸಗೊಬ್ಬರಗಳಲ್ಲಿ ಶೇ 40ರಷ್ಟು ಪೋಲಾಗುತ್ತಿದೆ. ಈ ನಿಟ್ಟಿನಲ್ಲಿ ಆಧುನಿಕ ಯಂತ್ರೋಪಕರಣಗಳು ಹಾಗೂ ಡ್ರೋನ್ ಬಳಕೆಯ ಕುರಿತು ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಬೇಕು ಎಂದರು.</p>.<p>ಕೃಷಿ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಎಚ್.ಎಸ್. ಶಿವರಾಮು ಮಾತನಾಡಿ, ‘ನಗರೀಕರಣದಿಂದಾಗಿ ನಾವು ಫಲವತ್ತಾದ ಭೂಮಿಯನ್ನು ಕಳೆದುಕೊಳ್ಳುತ್ತಿದ್ದೇವೆ. ಕೃಷಿಯಲ್ಲಿ ಅತಿಯಾದ ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಕೃಷಿಯಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ’ ಎಂದು ಹೇಳಿದರು.</p>.<p>ರಾಷ್ಟ್ರೀಯ ಸಂಜೀವಿನಿ ಕೌಶಲಾಭಿವೃದ್ಧಿ ಮಿಷನ್ನ ಮುಖ್ಯಸ್ಥ ವೇಣುಗೋಪಾಲ್ ಎಸ್.ಆರ್, ಏರೋಸೈಟ್ ಟೆಕ್ನಾಲಜೀಸ್ ಸಿಇಒ ಗೋಪಿನಾಥ್ ರಾಮಚಂದ್ರನ್, ಒಣಬೇಸಾಯ ಪ್ರಾಯೋಜನೆಯ ಮುಖ್ಯಸ್ಥ ಡಾ.ಮೂಡಲಗಿರಿಯಪ್ಪ ಉಪಸ್ಥಿತರಿದ್ದರು.</p>.<p>ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ 100ಕ್ಕೂ ಹೆಚ್ಚು ಮಹಿಳೆಯರಿಗೆ ಡ್ರೋನ್ ಉಪಯೋಗಿಸುವ ಹಾಗೂ ರಾಸಾಯನಿಕಗಳ ಪರಿಣಾಮಕಾರಿ ಬಳಕೆಯ ಕುರಿತು ತರಬೇತಿ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ: </strong>‘ಕೃಷಿಯ ಬಗ್ಗೆ ಆಸಕ್ತಿ ಬೆಳೆಸಿಕೊಂಡು ಬೆಳೆಗಳ ಕುರಿತು ಅಧ್ಯಯನ ಮಾಡುವುದರ ಜೊತೆಗೆ ಡ್ರೋನ್ ತಂತ್ರಜ್ಞಾನವನ್ನು ಬಳಸಿದರೆ ಸಾರ್ಥಕತೆ ಪಡೆಯಲು ಸಾಧ್ಯ’ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿ.ಸುರೇಶ ಹೇಳಿದರು.</p>.<p>ಕೃಷಿ ವಿಶ್ವವಿದ್ಯಾಲಯ, ಏರೋಸೈಟ್ ಟೆಕ್ನಾಲಜೀಸ್ ಹಾಗೂ ಕ್ರಾಫ್ಲೈಫ್ ಇಂಡಿಯಾ ಆಶ್ರಯದಲ್ಲಿ ಜಿಕೆವಿಕೆಯಲ್ಲಿ ಆಯೋಜಿಸಿದ್ದ ‘ಡ್ರೋನ್ ದೀದಿ’ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕೇವಲ ಡ್ರೋನ್ ಬಳಕೆದಾರರಾಗದೆ ಕೃಷಿಯಲ್ಲಿರುವ ಮೂಲಭೂತ ವಿಷಯಗಳನ್ನು ತಿಳಿದುಕೊಂಡು ಕೃಷಿ ವಿಸ್ತರಣಾ ಕಾರ್ಯಕರ್ತರಾಗಬೇಕು. ಆಗ ಕೃಷಿಯಲ್ಲಿ ಹೆಚ್ಚು ತೊಡಗಿಸಿಕೊಳ್ಳಲು ಹಾಗೂ ರೈತರ ವಿಶ್ವಾಸಗಳಿಸಿ ಅವರಿಗೆ ಅಗತ್ಯವಾದ ತಾಂತ್ರಿಕ ಸಲಹೆಗಳನ್ನು ನೀಡಲು ಅನುಕೂಲವಾಗುತ್ತದೆ’ ಎಂದರು.</p>.<p><strong>ಡ್ರೋನ್ ಬಳಸುವವರಿಗೆ ಪ್ರತಿ ಹಂತದಲ್ಲೂ ಕೃಷಿಯ ಬಗ್ಗೆ ಜ್ಞಾನವಿರಬೇಕು. ಎಷ್ಟು ಎತ್ತರದಲ್ಲಿ ಹಾರಿಸಿ, ಬೆಳೆಗಳಿಗೆ ನೀರು ಮತ್ತು ಔಷಧಿಗಳನ್ನು ಸಿಂಪಡಿಸಬೇಕು. ಬೆಳೆವಾರು, ಪ್ರಮಾಣ, ಸಮಯ ಈ ಎಲ್ಲ ಅಂಶಗಳ ಬಗ್ಗೆ ತಿಳಿದುಕೊಂಡು ಸಿಂಪಡಣೆ ಕಾರ್ಯ ಕೈಗೊಳ್ಳಬೇಕಾದುದು ಅತಿಮುಖ್ಯ ಎಂದು ತಿಳಿಸಿದರು.</strong></p>.<p>ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಶಿವಕುಮಾರ್ ಮಾತನಾಡಿ, ‘ಭೂಮಿಗೆ ಬಳಸುತ್ತಿರುವ ರಸಗೊಬ್ಬರಗಳಲ್ಲಿ ಶೇ 40ರಷ್ಟು ಪೋಲಾಗುತ್ತಿದೆ. ಈ ನಿಟ್ಟಿನಲ್ಲಿ ಆಧುನಿಕ ಯಂತ್ರೋಪಕರಣಗಳು ಹಾಗೂ ಡ್ರೋನ್ ಬಳಕೆಯ ಕುರಿತು ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಬೇಕು ಎಂದರು.</p>.<p>ಕೃಷಿ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಎಚ್.ಎಸ್. ಶಿವರಾಮು ಮಾತನಾಡಿ, ‘ನಗರೀಕರಣದಿಂದಾಗಿ ನಾವು ಫಲವತ್ತಾದ ಭೂಮಿಯನ್ನು ಕಳೆದುಕೊಳ್ಳುತ್ತಿದ್ದೇವೆ. ಕೃಷಿಯಲ್ಲಿ ಅತಿಯಾದ ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ಕೃಷಿಯಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ’ ಎಂದು ಹೇಳಿದರು.</p>.<p>ರಾಷ್ಟ್ರೀಯ ಸಂಜೀವಿನಿ ಕೌಶಲಾಭಿವೃದ್ಧಿ ಮಿಷನ್ನ ಮುಖ್ಯಸ್ಥ ವೇಣುಗೋಪಾಲ್ ಎಸ್.ಆರ್, ಏರೋಸೈಟ್ ಟೆಕ್ನಾಲಜೀಸ್ ಸಿಇಒ ಗೋಪಿನಾಥ್ ರಾಮಚಂದ್ರನ್, ಒಣಬೇಸಾಯ ಪ್ರಾಯೋಜನೆಯ ಮುಖ್ಯಸ್ಥ ಡಾ.ಮೂಡಲಗಿರಿಯಪ್ಪ ಉಪಸ್ಥಿತರಿದ್ದರು.</p>.<p>ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ 100ಕ್ಕೂ ಹೆಚ್ಚು ಮಹಿಳೆಯರಿಗೆ ಡ್ರೋನ್ ಉಪಯೋಗಿಸುವ ಹಾಗೂ ರಾಸಾಯನಿಕಗಳ ಪರಿಣಾಮಕಾರಿ ಬಳಕೆಯ ಕುರಿತು ತರಬೇತಿ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>