<p><strong>ಬೆಂಗಳೂರು: </strong>ಅನ್ನಪೂರ್ಣೇಶ್ವರಿ ನಗರ ಠಾಣೆ ವ್ಯಾಪ್ತಿಯಲ್ಲಿ ಬಾಲಮುರಳಿ ಎಂಬುವರನ್ನು ಸುಲಿಗೆ ಮಾಡಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.</p>.<p>‘ಘಟನೆ ಸಂಬಂಧ ಬನಶಂಕರಿ ನಿವಾಸಿ ಬಾಲಮುರಳಿ ದೂರು ನೀಡಿದ್ದಾರೆ. ಇಬ್ಬರು ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಮಲ್ಲತ್ತಹಳ್ಳಿಯಲ್ಲಿ ಕೆಲಸ ಮಾಡುತ್ತಿರುವ ಬಾಲಮುರಳಿ, ನ. 17ರ ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗಲು ಮಾಳಗಾಳ ಬಸ್ ನಿಲ್ದಾಣದಲ್ಲಿ ನಿಂತಿದ್ದರು. ಅದೇ ವೇಳೆ ಕಾರಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು, ಬನಶಂಕರಿವರೆಗೆ ಡ್ರಾಪ್ ನೀಡುವುದಾಗಿ ಹೇಳಿ ಹತ್ತಿಸಿಕೊಂಡಿದ್ದರು.’</p>.<p>‘ನಾಯಂಡನಹಳ್ಳಿ ಸೇತುವೆ ಬಳಿ ಕಾರು ನಿಲ್ಲಿಸಿದ್ದ ಆರೋಪಿಗಳು, ಚಾಕು ತೋರಿಸಿ ಬೆದರಿಸಿ ಮೊಬೈಲ್ ಕಿತ್ತುಕೊಂಡಿದ್ದರು. ಜೇಬಿನಲ್ಲಿದ್ದ ₹ 2,500 ನಗದು ಸುಲಿಗೆ ಮಾಡಿದ್ದರು. ಮೊಬೈಲ್ನಲ್ಲಿದ್ದ ವಾಲೆಟ್ ಮೂಲಕ ₹ 1 ಲಕ್ಷವನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದರು’ ಎಂದೂ ಪೊಲೀಸರು ತಿಳಿಸಿದರು.</p>.<p>‘ನೋಂದಣಿ ಸಂಖ್ಯೆ ಇಲ್ಲದ ಕಾರಿನಲ್ಲಿ ಆರೋಪಿಗಳು ಬಂದಿದ್ದರು. ಅವರ ಪತ್ತೆಗಾಗಿ, ಘಟನಾ ಸ್ಥಳದ ಸುತ್ತಮುತ್ತಲಿನ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅನ್ನಪೂರ್ಣೇಶ್ವರಿ ನಗರ ಠಾಣೆ ವ್ಯಾಪ್ತಿಯಲ್ಲಿ ಬಾಲಮುರಳಿ ಎಂಬುವರನ್ನು ಸುಲಿಗೆ ಮಾಡಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.</p>.<p>‘ಘಟನೆ ಸಂಬಂಧ ಬನಶಂಕರಿ ನಿವಾಸಿ ಬಾಲಮುರಳಿ ದೂರು ನೀಡಿದ್ದಾರೆ. ಇಬ್ಬರು ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಮಲ್ಲತ್ತಹಳ್ಳಿಯಲ್ಲಿ ಕೆಲಸ ಮಾಡುತ್ತಿರುವ ಬಾಲಮುರಳಿ, ನ. 17ರ ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗಲು ಮಾಳಗಾಳ ಬಸ್ ನಿಲ್ದಾಣದಲ್ಲಿ ನಿಂತಿದ್ದರು. ಅದೇ ವೇಳೆ ಕಾರಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು, ಬನಶಂಕರಿವರೆಗೆ ಡ್ರಾಪ್ ನೀಡುವುದಾಗಿ ಹೇಳಿ ಹತ್ತಿಸಿಕೊಂಡಿದ್ದರು.’</p>.<p>‘ನಾಯಂಡನಹಳ್ಳಿ ಸೇತುವೆ ಬಳಿ ಕಾರು ನಿಲ್ಲಿಸಿದ್ದ ಆರೋಪಿಗಳು, ಚಾಕು ತೋರಿಸಿ ಬೆದರಿಸಿ ಮೊಬೈಲ್ ಕಿತ್ತುಕೊಂಡಿದ್ದರು. ಜೇಬಿನಲ್ಲಿದ್ದ ₹ 2,500 ನಗದು ಸುಲಿಗೆ ಮಾಡಿದ್ದರು. ಮೊಬೈಲ್ನಲ್ಲಿದ್ದ ವಾಲೆಟ್ ಮೂಲಕ ₹ 1 ಲಕ್ಷವನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದರು’ ಎಂದೂ ಪೊಲೀಸರು ತಿಳಿಸಿದರು.</p>.<p>‘ನೋಂದಣಿ ಸಂಖ್ಯೆ ಇಲ್ಲದ ಕಾರಿನಲ್ಲಿ ಆರೋಪಿಗಳು ಬಂದಿದ್ದರು. ಅವರ ಪತ್ತೆಗಾಗಿ, ಘಟನಾ ಸ್ಥಳದ ಸುತ್ತಮುತ್ತಲಿನ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>