ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಪರಿಸ್ಥಿತಿ ಸಮಾಲೋಚನೆ: ಯಡಿಯೂರಪ್ಪ ಸಭೆ

Last Updated 2 ಆಗಸ್ಟ್ 2019, 5:35 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಬಗ್ಗೆ ಮಾಹಿತಿ ತಿಳಿದುಕೊಂಡು, ಪರಿಹಾರ ಕ್ರಮಗಳ ಕುರಿತು ಸಮಾಲೋಚನೆ ನಡೆಸುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಭೆ ಕರೆದಿದ್ದು, ವಿಧಾನಸೌಧದ ಸಮ್ಮೇಳನ ಸಭಾಂಗಣ ಸಜ್ಜಾಗುತ್ತಿದೆ.

ರಾಜ್ಯದ ಎಲ್ಲ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ ಗಳು ಸಭೆಯಲ್ಲಿ ಪಾಲ್ಗೊಳ್ಳಲು ಬರುತ್ತಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಸಭೆ ಆರಂಭವಾಗಬೇಕು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೈದರಾಬಾದ್ ಗೆ ಹೋದವರು ಈಗಷ್ಟೇ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ಹೀಗಾಗಿ ಸಭೆ ಸ್ವಲ್ಪ ವಿಳಂಬವಾಗಿ ಆರಂಭವಾಗುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಅವರು ಇದೇ 4 ಮತ್ತು 5ರಂದು ದೆಹಲಿಗೆ ತೆರಳಲಿದ್ದು, ಸಂಪುಟ ವಿಸ್ತರಣೆ ಕುರಿತು ಚರ್ಚಿಸುವರು. ಜತೆಗೆ ಬರ ಪರಿಹಾರಕ್ಕೆ ವಿಶೇಷ ಅನುದಾನ ದೊರಕಿಸುವ ನಿಟ್ಟಿನಲ್ಲಿ ಕೇಂದ್ರದ ಮೇಲೆ ಒತ್ತಡ ಹೇರುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT