<p><strong>ಬೆಂಗಳೂರು:</strong> ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2024 ಮತ್ತು 2025ನೇ ಸಾಲಿನ ‘ಡಾ.ರಾಜ್ಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿ’ಗೆ ಕ್ರಮವಾಗಿ ರಂಗಕಲಾವಿದೆ ಮತ್ತು ಗಾಯಕಿ ಸುಮತಿ ಶ್ರೀ ಎಸ್. ನವಲಿ ಹಿರೇಮಠ ಮತ್ತು ಚಿತ್ರನಟ ಹೊನ್ನವಳ್ಳಿ ಕೃಷ್ಣ ಅವರು ಆಯ್ಕೆಯಾಗಿದ್ದಾರೆ.</p>.<p>ಸುಮತಿ ಶ್ರೀ ಎಸ್.ನವಲಿ ಹಿರೇಮಠ ಅವರು ಏಳನೆಯ ವಯಸ್ಸಿನಿಂದಲೂ ರಂಗಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸ್ವಂತ ನಾಟಕ ಕಂಪನಿಯನ್ನು ನಡೆಸಿದ್ದಾರೆ. ಸವಡಿಯಲ್ಲಿ ವೃದ್ದಾಶ್ರಮ ಹಾಗೂ ಉಚಿತ ಕನ್ನಡ ಶಾಲೆ ನಡೆಸುತ್ತಿದ್ದಾರೆ. ಮೂರು ಹಳ್ಳಿಗಳನ್ನು ದತ್ತು ಪಡೆದು ಅವುಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.</p>.<p>ನಟ ಹೊನ್ನವಳ್ಳಿ ಕೃಷ್ಣ ಅವರು ರಾಜ್ಕುಮಾರ್ ಕುಟುಂಬದ ಆಪ್ತರು. ರಾಜ್ಕುಮಾರ್ ಅವರೊಂದಿಗೆ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.</p>.<p>ರಾಜ್ಕುಮಾರ್ ಅವರಿಗೆ ’ದಾದಾ ಸಾಹೇಬ್ ಫಾಲ್ಕೆ’ ಪುರಸ್ಕಾರ ಬಂದಾಗ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಈ ದತ್ತಿ ಸ್ಥಾಪಿಸಲಾಯಿತು. ಮುಂದೆ ಪಾರ್ವತಮ್ಮ ರಾಜ್ಕುಮಾರ್ ಅವರು, ಇದಕ್ಕೆ ಇನ್ನಷ್ಟು ಹಣ ಸೇರಿಸಿದ್ದರು. ರಂಗಭೂಮಿ ಅಥವಾ ಚಿತ್ರರಂಗದ ಸಾಧಕರಿಗೆ ಈ ದತ್ತಿಯನ್ನು ನೀಡಲಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2024 ಮತ್ತು 2025ನೇ ಸಾಲಿನ ‘ಡಾ.ರಾಜ್ಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿ’ಗೆ ಕ್ರಮವಾಗಿ ರಂಗಕಲಾವಿದೆ ಮತ್ತು ಗಾಯಕಿ ಸುಮತಿ ಶ್ರೀ ಎಸ್. ನವಲಿ ಹಿರೇಮಠ ಮತ್ತು ಚಿತ್ರನಟ ಹೊನ್ನವಳ್ಳಿ ಕೃಷ್ಣ ಅವರು ಆಯ್ಕೆಯಾಗಿದ್ದಾರೆ.</p>.<p>ಸುಮತಿ ಶ್ರೀ ಎಸ್.ನವಲಿ ಹಿರೇಮಠ ಅವರು ಏಳನೆಯ ವಯಸ್ಸಿನಿಂದಲೂ ರಂಗಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸ್ವಂತ ನಾಟಕ ಕಂಪನಿಯನ್ನು ನಡೆಸಿದ್ದಾರೆ. ಸವಡಿಯಲ್ಲಿ ವೃದ್ದಾಶ್ರಮ ಹಾಗೂ ಉಚಿತ ಕನ್ನಡ ಶಾಲೆ ನಡೆಸುತ್ತಿದ್ದಾರೆ. ಮೂರು ಹಳ್ಳಿಗಳನ್ನು ದತ್ತು ಪಡೆದು ಅವುಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.</p>.<p>ನಟ ಹೊನ್ನವಳ್ಳಿ ಕೃಷ್ಣ ಅವರು ರಾಜ್ಕುಮಾರ್ ಕುಟುಂಬದ ಆಪ್ತರು. ರಾಜ್ಕುಮಾರ್ ಅವರೊಂದಿಗೆ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.</p>.<p>ರಾಜ್ಕುಮಾರ್ ಅವರಿಗೆ ’ದಾದಾ ಸಾಹೇಬ್ ಫಾಲ್ಕೆ’ ಪುರಸ್ಕಾರ ಬಂದಾಗ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಈ ದತ್ತಿ ಸ್ಥಾಪಿಸಲಾಯಿತು. ಮುಂದೆ ಪಾರ್ವತಮ್ಮ ರಾಜ್ಕುಮಾರ್ ಅವರು, ಇದಕ್ಕೆ ಇನ್ನಷ್ಟು ಹಣ ಸೇರಿಸಿದ್ದರು. ರಂಗಭೂಮಿ ಅಥವಾ ಚಿತ್ರರಂಗದ ಸಾಧಕರಿಗೆ ಈ ದತ್ತಿಯನ್ನು ನೀಡಲಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>