<p><strong>ಕೆ.ಆರ್.ಪುರ:</strong> ಯುವಕರು ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಬೆಂಗಳೂರು ನಗರ ಅಪರಾಧ ವಿಭಾಗದ ಡಿಸಿಪಿ ಹರಿಬಾಬು ಹೇಳಿದರು.</p>.<p>ಕೆ.ಆರ್.ಪುರ ಸಮೀಪದ ಎನ್.ಆರ್.ಐ ಬಡಾವಣೆಯಲ್ಲಿ ಎಸ್.ಕೆ.ಎಫ್ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಡ್ರಗ್ಸ್ ಮುಕ್ತ ರಾಮಮೂರ್ತಿನಗರ ಮ್ಯಾರಥಾನ್ನಲ್ಲಿ ಮಾತನಾಡಿದರು.</p>.<p>ಅತಿಹೆಚ್ಚು ಯುವಕರನ್ನು ಹೊಂದಿರುವ ಭಾರತದಲ್ಲಿ ಮಾದಕ ವ್ಯಸನದಂತಹ ಚಟಗಳಿಗೆ ಹದಿಹರೆಯದ ಯುವಕರು ಬಲಿಯಾಗುತ್ತಿರುವ ಖೇದಕರ ಸಂಗತಿ. ಯುವ ಸಮೂಹವೊಂದಿದ್ದರೆ ದೇಶ ಅಭಿವೃದ್ಧಿ ಹೊಂದಲು ಸಹಕಾರಿಯಾಗುತ್ತದೆ. ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಅರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕು ಎಂದರು.</p>.<p>ನಟಿ ಸಪ್ತಮಿಗೌಡ ಮಾತನಾಡಿ, ಸಮಾಜದ ಕಾಳಜಿಯಿಂದ ಯುವಕರನ್ನು ಮಾದಕ ವ್ಯಸನದಿಂದ ಕಾಪಾಡುವ ಉದ್ದೇಶದಿಂದ ಎಸ್.ಕೆ.ಎಫ್ ಫೌಂಡೇಶನ್ ಹಮ್ಮಿಕೊಂಡಿರುವ ಕಾರ್ಯಕ್ರಮ ಶ್ಲಾಘನೀಯ ಎಂದರು.</p>.<p>ಮ್ಯಾರಥಾನ್ ನಲ್ಲಿ ರಾಮಮೂರ್ತಿನಗರದ ಸುತ್ತಮುತ್ತಲಿನ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಅಪಾರ್ಟ್ಮೆಂಟ್ ನಿವಾಸಿಗಳು, ಪೋಲಿಸ್ ಅಧಿಕಾರಿಗಳು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.</p>.<p>ಎಸ್.ಕೆ.ಎಫ್ ಫೌಂಡೇಶನ್ ನ ಅಧ್ಯಕ್ಷೆ ಶಾಂತಕೃಷ್ಣಮೂರ್ತಿ, ಸಂಸ್ಥಾಪಕ ಸದಸ್ಯ ಕಲ್ಕೆರೆ ಕೃಷ್ಣಮೂರ್ತಿ, ಮ್ಯಾರಥಾನ್ ಪಟು ಭಾಗ್ಯಶ್ರೀ ಸವಾಂತ್, ಇನ್ಸ್ಪೆಕ್ಟರ್ ಸತೀಶ್, ಅಂಬರೀಶ್, ಪೃಥ್ವಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಯುವಕರು ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಬೆಂಗಳೂರು ನಗರ ಅಪರಾಧ ವಿಭಾಗದ ಡಿಸಿಪಿ ಹರಿಬಾಬು ಹೇಳಿದರು.</p>.<p>ಕೆ.ಆರ್.ಪುರ ಸಮೀಪದ ಎನ್.ಆರ್.ಐ ಬಡಾವಣೆಯಲ್ಲಿ ಎಸ್.ಕೆ.ಎಫ್ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಡ್ರಗ್ಸ್ ಮುಕ್ತ ರಾಮಮೂರ್ತಿನಗರ ಮ್ಯಾರಥಾನ್ನಲ್ಲಿ ಮಾತನಾಡಿದರು.</p>.<p>ಅತಿಹೆಚ್ಚು ಯುವಕರನ್ನು ಹೊಂದಿರುವ ಭಾರತದಲ್ಲಿ ಮಾದಕ ವ್ಯಸನದಂತಹ ಚಟಗಳಿಗೆ ಹದಿಹರೆಯದ ಯುವಕರು ಬಲಿಯಾಗುತ್ತಿರುವ ಖೇದಕರ ಸಂಗತಿ. ಯುವ ಸಮೂಹವೊಂದಿದ್ದರೆ ದೇಶ ಅಭಿವೃದ್ಧಿ ಹೊಂದಲು ಸಹಕಾರಿಯಾಗುತ್ತದೆ. ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಅರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕು ಎಂದರು.</p>.<p>ನಟಿ ಸಪ್ತಮಿಗೌಡ ಮಾತನಾಡಿ, ಸಮಾಜದ ಕಾಳಜಿಯಿಂದ ಯುವಕರನ್ನು ಮಾದಕ ವ್ಯಸನದಿಂದ ಕಾಪಾಡುವ ಉದ್ದೇಶದಿಂದ ಎಸ್.ಕೆ.ಎಫ್ ಫೌಂಡೇಶನ್ ಹಮ್ಮಿಕೊಂಡಿರುವ ಕಾರ್ಯಕ್ರಮ ಶ್ಲಾಘನೀಯ ಎಂದರು.</p>.<p>ಮ್ಯಾರಥಾನ್ ನಲ್ಲಿ ರಾಮಮೂರ್ತಿನಗರದ ಸುತ್ತಮುತ್ತಲಿನ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಅಪಾರ್ಟ್ಮೆಂಟ್ ನಿವಾಸಿಗಳು, ಪೋಲಿಸ್ ಅಧಿಕಾರಿಗಳು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.</p>.<p>ಎಸ್.ಕೆ.ಎಫ್ ಫೌಂಡೇಶನ್ ನ ಅಧ್ಯಕ್ಷೆ ಶಾಂತಕೃಷ್ಣಮೂರ್ತಿ, ಸಂಸ್ಥಾಪಕ ಸದಸ್ಯ ಕಲ್ಕೆರೆ ಕೃಷ್ಣಮೂರ್ತಿ, ಮ್ಯಾರಥಾನ್ ಪಟು ಭಾಗ್ಯಶ್ರೀ ಸವಾಂತ್, ಇನ್ಸ್ಪೆಕ್ಟರ್ ಸತೀಶ್, ಅಂಬರೀಶ್, ಪೃಥ್ವಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>