<p><strong>ಬೆಂಗಳೂರು:</strong> ಗಾಂಜಾ ಹಾಗೂಎಂಡಿಎಂಎ ಮಾರುತ್ತಿದ್ದ ಕೇರಳದ ಮೂವರು ಆರೋಪಿಗಳನ್ನು ಜೆ.ಸಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ನಿವಾಸಿ ಜಿಂಡೋಜೇಮ್ಸ್ (29), ಅತ್ತಿಬೆಲೆಯ ಆದರ್ಶ (27) ಹಾಗೂ ಇನ್ಮೇಶ್ (32) ಬಂಧಿತರು.</p>.<p>ಜೆ.ಸಿ.ನಗರ ಠಾಣಾ ವ್ಯಾಪ್ತಿಯ ಬೋರ್ ಬಂಕ್ ರಸ್ತೆಯಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಇವರಿಂದ ₹25 ಲಕ್ಷ ಮೌಲ್ಯದ 45 ಕೆ.ಜಿ ಗಾಂಜಾ, 70 ಗ್ರಾಂ ಎಂಡಿಎಂಎ, ಒಂದು ಸಾವಿರ ನಗದು, ಕೃತ್ಯಕ್ಕೆ ಬಳಸುತ್ತಿದ್ದ ಕಾರು ವಶಕ್ಕೆ ಪಡೆದಿದ್ದಾರೆ.</p>.<p>ಜಾಲಹಳ್ಳಿ ಠಾಣೆಯ ವ್ಯಾಪ್ತಿಯ ಗಾಂಜಾ ಮಾರಾಟ ಪ್ರಕರಣದಲ್ಲಿ ಜೈಲಿನಲ್ಲಿರುವ ಲೂಬಿನ್ ಅಮಲ್ ನಾಥ್ ಎಂಬುವನಿಂದ ಆರೋಪಿಗಳು ಈ ಹಿಂದೆ ಗಾಂಜಾ ಖರೀದಿಸಿ, ಸೇವನೆ ಮಾಡುತ್ತಿದ್ದರು.</p>.<p>ಅಮಲ್ ನಾಥ್ನಿಂದ ಗಾಂಜಾ ಮಾರುವ ಮಾಹಿತಿ ಪಡೆದಿದ್ದ ಆರೋಪಿಗಳು, ವ್ಯಕ್ತಿಯೊಬ್ಬರಿಂದ ವಿಶಾಖಪಟ್ಟಣ ಹಾಗೂ ಆಂಧ್ರಪ್ರದೇಶದ ಗಡಿ ಭಾಗಗಳಿಂದ ಕಾರು, ಟ್ರಕ್ ಹಾಗೂ ಲಾರಿಗಳಲ್ಲಿ ಗಾಂಜಾ ತರಿಸಿಕೊಂಡು, ಅತ್ತಿಬೆಲೆಯಲ್ಲಿ ತಾವು ವಾಸವಿರುವ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗಾಂಜಾ ಹಾಗೂಎಂಡಿಎಂಎ ಮಾರುತ್ತಿದ್ದ ಕೇರಳದ ಮೂವರು ಆರೋಪಿಗಳನ್ನು ಜೆ.ಸಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ನಿವಾಸಿ ಜಿಂಡೋಜೇಮ್ಸ್ (29), ಅತ್ತಿಬೆಲೆಯ ಆದರ್ಶ (27) ಹಾಗೂ ಇನ್ಮೇಶ್ (32) ಬಂಧಿತರು.</p>.<p>ಜೆ.ಸಿ.ನಗರ ಠಾಣಾ ವ್ಯಾಪ್ತಿಯ ಬೋರ್ ಬಂಕ್ ರಸ್ತೆಯಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಇವರಿಂದ ₹25 ಲಕ್ಷ ಮೌಲ್ಯದ 45 ಕೆ.ಜಿ ಗಾಂಜಾ, 70 ಗ್ರಾಂ ಎಂಡಿಎಂಎ, ಒಂದು ಸಾವಿರ ನಗದು, ಕೃತ್ಯಕ್ಕೆ ಬಳಸುತ್ತಿದ್ದ ಕಾರು ವಶಕ್ಕೆ ಪಡೆದಿದ್ದಾರೆ.</p>.<p>ಜಾಲಹಳ್ಳಿ ಠಾಣೆಯ ವ್ಯಾಪ್ತಿಯ ಗಾಂಜಾ ಮಾರಾಟ ಪ್ರಕರಣದಲ್ಲಿ ಜೈಲಿನಲ್ಲಿರುವ ಲೂಬಿನ್ ಅಮಲ್ ನಾಥ್ ಎಂಬುವನಿಂದ ಆರೋಪಿಗಳು ಈ ಹಿಂದೆ ಗಾಂಜಾ ಖರೀದಿಸಿ, ಸೇವನೆ ಮಾಡುತ್ತಿದ್ದರು.</p>.<p>ಅಮಲ್ ನಾಥ್ನಿಂದ ಗಾಂಜಾ ಮಾರುವ ಮಾಹಿತಿ ಪಡೆದಿದ್ದ ಆರೋಪಿಗಳು, ವ್ಯಕ್ತಿಯೊಬ್ಬರಿಂದ ವಿಶಾಖಪಟ್ಟಣ ಹಾಗೂ ಆಂಧ್ರಪ್ರದೇಶದ ಗಡಿ ಭಾಗಗಳಿಂದ ಕಾರು, ಟ್ರಕ್ ಹಾಗೂ ಲಾರಿಗಳಲ್ಲಿ ಗಾಂಜಾ ತರಿಸಿಕೊಂಡು, ಅತ್ತಿಬೆಲೆಯಲ್ಲಿ ತಾವು ವಾಸವಿರುವ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>