ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂದಿ ಸಾಕಾಣಿಕೆ ಜೊತೆಯಲ್ಲೇ ಗಾಂಜಾ ದಂಧೆ

ಆಂಧ್ರಪ್ರದೇಶದ ಇಬ್ಬರನ್ನು ಬಂಧಿಸಿದ ಪೊಲೀಸರು
Last Updated 1 ಜುಲೈ 2021, 21:57 IST
ಅಕ್ಷರ ಗಾತ್ರ

ಬೆಂಗಳೂರು: ಆಂಧ್ರಪ್ರದೇಶದಿಂದ ನಗರಕ್ಕೆ ಗಾಂಜಾ ತಂದು ಮಾರುತ್ತಿದ್ದ ಆರೋಪದಡಿ ಇಬ್ಬರನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಎ.ವಿಜಯ್ (23) ಹಾಗೂ ಶಿವಕುಮಾರ್ (37) ಬಂಧಿತರು. ಅವರಿಂದ 75 ಕೆ.ಜಿ 760 ಗ್ರಾಂ ಗಾಂಜಾ, ಮೊಬೈಲ್ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

‘ಠಾಣೆ ವ್ಯಾಪ್ತಿಯ ಲೊಟ್ಟೆಗೊಲ್ಲಹಳ್ಳಿ ರೈಲ್ವೆ‌ ನಿಲ್ದಾಣ ಬಳಿ ಮಾದಕ ವಸ್ತು ವ್ಯಸನಿಯೊಬ್ಬ ಗಸ್ತು ಸಿಬ್ಬಂದಿಗೆ ಸಿಕ್ಕಿಬಿದ್ದಿದ್ದ. ಆತನನ್ನು ವಿಚಾರಣೆ ನಡೆಸಿದಾಗ, ಮಾಹಿತಿ ಲಭ್ಯವಾಗಿತ್ತು.’

ಹಂದಿ ಸಾಕಾಣಿಕೆ: ‘ಆರೋಪಿ ವಿಜಯ್, ತನ್ನ ಊರಿನಲ್ಲಿ ಹಂದಿ ಸಾಕಾಣಿಕೆ ಮಾಡುತ್ತಿದ್ದ. ಆಂಧ್ರಪ್ರದೇಶದ ಗಡಿಭಾಗದ ಹಳ್ಳಿಗಳಲ್ಲಿ ಬೆಳೆಯುತ್ತಿದ್ದ ಗಾಂಜಾವನ್ನು ಖರೀದಿಸಿ ತಂದು, ಸರಕು ಸಾಗಾಣಿಕೆ ವಾಹನದ ಚಾಲಕರಿಗೆ ಹೆಚ್ಚಿನ ಹಣ ಕೊಟ್ಟು, ರಾಷ್ಟ್ರೀಯ ಹೆದ್ದಾರಿ ಮೂಲಕ ಗಾಂಜಾವನ್ನು ಬೆಂಗಳೂರಿಗೆ ತರುತ್ತಿದ್ದ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT