ರಾಜಾಸೀಟ್ ಉದ್ಯಾನದ ಸುತ್ತ ಕಾಂಪೌಂಡ್ ನಿರ್ಮಿಸಲಾಗಿದ್ದು, ಅರಣ್ಯದಂಚಿಗೆ ಅಗ್ನಿಶಾಮಕ ವಾಹನ ಕೊಂಡೊಯ್ಯಲು ಸಾಧ್ಯವಿಲ್ಲ. ಹೀಗಾಗಿ, ಸಿಬ್ಬಂದಿಗೆ ತಕ್ಷಣವೇ ಬೆಂಕಿ ವ್ಯಾಪಿಸುವುದನ್ನು ತಡೆಯಲು ಸಾಧ್ಯವಾಗಲಿಲ್ಲ. ಅಗ್ನಿ ಶಾಮಕ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಜಂಟಿಯಾಗಿ ಮರದ ಸೊಪ್ಪು ಹಿಡಿದು ಬೆಂಕಿ ನಿಯಂತ್ರಿಸಿದರು. ಸುಮಾರು ಮೂರು ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಯಶಸ್ವಿಯಾದರು.