<p><strong>ಬೆಂಗಳೂರು:</strong> ‘ಮಾದಕ ವಸ್ತು ಅಂಶವಿರುವ ಮಾತ್ರೆಗಳನ್ನು ಸೇವಿಸಿಯುವಕರಿಬ್ಬರು ಮೃತಪಟ್ಟಿದ್ದಾರೆ’ ಎನ್ನಲಾದ ಪ್ರಕರಣ ಸಂಬಂಧ ಪಶ್ಚಿಮ ಕಾರ್ಡ್ ರಸ್ತೆಯ ಮನ್ದೀಪ್ ಫಾರ್ಮ್ ಔಷಧಿ ಮಳಿಗೆ ಮಾಲೀಕ ಮನೀಶ್ ಕುಮಾರ್ (30) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ವೈಯಾಲಿಕಾವಲ್ ಸಮೀಪದ ಕೋದಂಡರಾಮಪುರ ನಿವಾಸಿಗಳಾದ ಅಭಿಲಾಷ್ (23) ಮತ್ತು ಗೋಪಿ (30) ಎಂಬುವರು ಇತ್ತೀಚೆಗೆ ಮೃತಪಟ್ಟಿದ್ದರು. ತನಿಖೆ ಕೈಗೊಂಡಿದ್ದ ಪೊಲೀಸರು, ಮಾದಕ ವಸ್ತು ಅಂಶವಿರುವ ಮಾತ್ರೆಗಳನ್ನು ಸೇವಿಸಿದ್ದೇ ಅವರ ಸಾವಿಗೆ ಕಾರಣವಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದರು.</p>.<p>ಇದೀಗ ಯುವಕರಿಗೆ ಮಾತ್ರೆ ಮಾರಾಟ ಮಾಡಿದ್ದ ಔಷಧಿ ಮಳಿಗೆ ಮಾಲೀಕನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಅದರ ಜೊತೆಗೆ ಔಷಧ ನಿಯಂತ್ರಣ ಅಧಿಕಾರಿಗಳು, ಔಷಧಿ ಮಳಿಗೆ ಮೇಲೆ ದಾಳಿ ಮಾಡಿದ್ದಾರೆ. ಹಲವು ಬಗೆಯ ಔಷಧಿಗಳನ್ನು ಜಪ್ತಿ ಮಾಡಿ ಮಳಿಗೆಗೆ ಬೀಗ ಹಾಕಿದ್ದಾರೆ.</p>.<p>‘ಮೃತ ಯುವಕರು ಮನ್ದೀಪ್ ಫಾರ್ಮ್ ಔಷಧಿ ಮಳಿಗೆಯಲ್ಲಿ ಮಾತ್ರೆಗಳನ್ನು ಖರೀದಿ ಮಾಡಿದ್ದರು. ಮಳಿಗೆಯ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ವೈದ್ಯರ ಸಲಹೆ ಇಲ್ಲದೇ ಮಾತ್ರೆಗಳನ್ನು ಯುವಕರಿಗೆ ಮಾರಾಟ ಮಾಡಿರುವುದನ್ನು ಮಾಲೀಕ ಒಪ್ಪಿಕೊಂಡರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಕೆಲ ನಿಷೇಧಿತ ಮಾತ್ರೆಗಳನ್ನು ಮಳಿಗೆಯಲ್ಲಿ ಸಂಗ್ರಹಿಸಲಾಗಿದೆ. ಆ ಬಗ್ಗೆ ಔಷಧ ನಿಯಂತ್ರಕರು ಪ್ರತ್ಯೇಕ ತನಿಖೆ ನಡೆಸುತ್ತಿದ್ದಾರೆ. ಮಳಿಗೆಯ ಪರವಾನಗಿ ರದ್ದು ಮಾಡಲು ಅವರೇ ಕ್ರಮ ಕೈಗೊಳ್ಳಲಿದ್ದಾರೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮಾದಕ ವಸ್ತು ಅಂಶವಿರುವ ಮಾತ್ರೆಗಳನ್ನು ಸೇವಿಸಿಯುವಕರಿಬ್ಬರು ಮೃತಪಟ್ಟಿದ್ದಾರೆ’ ಎನ್ನಲಾದ ಪ್ರಕರಣ ಸಂಬಂಧ ಪಶ್ಚಿಮ ಕಾರ್ಡ್ ರಸ್ತೆಯ ಮನ್ದೀಪ್ ಫಾರ್ಮ್ ಔಷಧಿ ಮಳಿಗೆ ಮಾಲೀಕ ಮನೀಶ್ ಕುಮಾರ್ (30) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ವೈಯಾಲಿಕಾವಲ್ ಸಮೀಪದ ಕೋದಂಡರಾಮಪುರ ನಿವಾಸಿಗಳಾದ ಅಭಿಲಾಷ್ (23) ಮತ್ತು ಗೋಪಿ (30) ಎಂಬುವರು ಇತ್ತೀಚೆಗೆ ಮೃತಪಟ್ಟಿದ್ದರು. ತನಿಖೆ ಕೈಗೊಂಡಿದ್ದ ಪೊಲೀಸರು, ಮಾದಕ ವಸ್ತು ಅಂಶವಿರುವ ಮಾತ್ರೆಗಳನ್ನು ಸೇವಿಸಿದ್ದೇ ಅವರ ಸಾವಿಗೆ ಕಾರಣವಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದರು.</p>.<p>ಇದೀಗ ಯುವಕರಿಗೆ ಮಾತ್ರೆ ಮಾರಾಟ ಮಾಡಿದ್ದ ಔಷಧಿ ಮಳಿಗೆ ಮಾಲೀಕನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಅದರ ಜೊತೆಗೆ ಔಷಧ ನಿಯಂತ್ರಣ ಅಧಿಕಾರಿಗಳು, ಔಷಧಿ ಮಳಿಗೆ ಮೇಲೆ ದಾಳಿ ಮಾಡಿದ್ದಾರೆ. ಹಲವು ಬಗೆಯ ಔಷಧಿಗಳನ್ನು ಜಪ್ತಿ ಮಾಡಿ ಮಳಿಗೆಗೆ ಬೀಗ ಹಾಕಿದ್ದಾರೆ.</p>.<p>‘ಮೃತ ಯುವಕರು ಮನ್ದೀಪ್ ಫಾರ್ಮ್ ಔಷಧಿ ಮಳಿಗೆಯಲ್ಲಿ ಮಾತ್ರೆಗಳನ್ನು ಖರೀದಿ ಮಾಡಿದ್ದರು. ಮಳಿಗೆಯ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ವೈದ್ಯರ ಸಲಹೆ ಇಲ್ಲದೇ ಮಾತ್ರೆಗಳನ್ನು ಯುವಕರಿಗೆ ಮಾರಾಟ ಮಾಡಿರುವುದನ್ನು ಮಾಲೀಕ ಒಪ್ಪಿಕೊಂಡರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಕೆಲ ನಿಷೇಧಿತ ಮಾತ್ರೆಗಳನ್ನು ಮಳಿಗೆಯಲ್ಲಿ ಸಂಗ್ರಹಿಸಲಾಗಿದೆ. ಆ ಬಗ್ಗೆ ಔಷಧ ನಿಯಂತ್ರಕರು ಪ್ರತ್ಯೇಕ ತನಿಖೆ ನಡೆಸುತ್ತಿದ್ದಾರೆ. ಮಳಿಗೆಯ ಪರವಾನಗಿ ರದ್ದು ಮಾಡಲು ಅವರೇ ಕ್ರಮ ಕೈಗೊಳ್ಳಲಿದ್ದಾರೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>