<p><strong>ಬೆಂಗಳೂರು: </strong>‘ಮಾದಕ ವಸ್ತುಗಳ ಉತ್ಪಾದನೆ ಮತ್ತು ಬಳಕೆ ಮನುಕುಲಕ್ಕೆ ಕಂಟಕ. ಯುವ ಸಮೂಹ ಹೆಚ್ಚಾಗಿ ಈ ವ್ಯಸನಕ್ಕೆ ಬಲಿಯಾಗುತ್ತಿದೆ. ಡ್ರಗ್ಸ್ ಜಾಲ ನಿಯಂತ್ರಿಸಲು ರಾಜಕೀಯ ಇಚ್ಛಾಶಕ್ತಿಯ ಕೊರತೆ ಇದೆ’ ಎಂದು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನದಾಸ್ ಅಭಿಪ್ರಾಯಪಟ್ಟರು.</p>.<p>ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಮತ್ತು ಅಖಿಲ ಭಾರತ ವಕೀಲರ ಒಕ್ಕೂಟವು ‘ಮಾದಕ ವಸ್ತು– ಸಮಸ್ಯೆ, ಸವಾಲು, ಪರಿಹಾರ’ ಕುರಿತು ಭಾನುವಾರ ಹಮ್ಮಿಕೊಂಡಿದ್ದ ಆನ್ಲೈನ್ ವೆಬಿನಾರ್ನಲ್ಲಿ ಅವರು ಮಾತನಾಡಿದರು.</p>.<p>‘ಅಂದಾಜಿನ ಪ್ರಕಾರ, ದೇಶದಲ್ಲಿ ಜನ ದಿನಕ್ಕೆ 1 ಟನ್ ಹೆರಾಯಿನ್ ಬಳಸುತ್ತಿದ್ದು, ಇದರ ಮೌಲ್ಯ ₹100 ಕೋಟಿ. 100ಕ್ಕೂ ಹೆಚ್ಚು ಬಲಿಷ್ಠ ಮಾಫಿಯಾಗಳು ಈ ದಂಧೆಯಲ್ಲಿ ತೊಡಗಿವೆ. ಇವುಗಳನ್ನು ತಡೆಯಲು ಕಾನೂನುಗಳಿದ್ದರೂ ಅನುಷ್ಠಾನಕ್ಕೆ ರಾಜಕೀಯ ಇಚ್ಛಾಶಕ್ತಿ ಬೇಕು’ ಎಂದರು.</p>.<p>‘ಡ್ರಗ್ಸ್ ಸೇವಿಸುವ ವ್ಯಸನಿಗಳು ತಮ್ಮ ವೃತ್ತಿ ಜೀವನ, ಕೌಟುಂಬಿಕ ಜೀವನ ಹಾಗೂ ಮಾನಸಿಕ–ದೈಹಿಕ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಾರೆ. ಜಾಗತಿಕವಾಗಿ ವ್ಯಾಪಿಸಿರುವ ಈ ದಂಧೆಯನ್ನು ಅಂತರರಾಷ್ಟ್ರೀಯ ಸಂಬಂಧಗಳನ್ನು ಬಲಿಷ್ಠಗೊಳಿಸುವ ಮೂಲಕ ತಡೆಗಟ್ಟಬೇಕು’ ಎಂದು ಸಲಹೆ ನೀಡಿದರು.</p>.<p>ಹಿರಿಯ ಮನೋರೋಗ ತಜ್ಞ ಡಾ. ಸಿ.ಆರ್. ಚಂದ್ರಶೇಖರ್, ‘ಡ್ರಗ್ಸ್ ವ್ಯಾಮೋಹಕ್ಕೆ ತುತ್ತಾದವರು, ಒತ್ತಡಕ್ಕೆ ಒಳಗಾಗುತ್ತಾರೆ. ಅದು ಸಿಗದೇ ಇದ್ದಾಗ ತಮ್ಮ ಮೇಲೆಯೇ ನಿಯಂತ್ರಣ ಕಳೆದುಕೊಳ್ಳುತ್ತಾರೆ. ಇಂತಹ ಚಟ ಕಲಿಸುವವರಿಂದ ದೂರ ಉಳಿಯಬೇಕು. ವ್ಯಸನಿಗಳಿಗೆ ನಿಯಮಿತವಾಗಿ ಆಪ್ತ ಸಮಾಲೋಚನೆ ನಡೆಸಬೇಕು’ ಎಂದು ಹೇಳಿದರು.</p>.<p>ಸಂಘಟನೆಯ ಕೆ.ಎಸ್. ವಿಮಲಾ, ‘ಡ್ರಗ್ಸ್ ಜಾಲದಲ್ಲಿ ಯಾರೇ ಇದ್ದರೂ ತಪ್ಪು. ಆದರೆ, ಅಪರಾಧವನ್ನು ಸಾಬೀತು ಮಾಡುವ ದಾರಿಯು ತಾಳ ತಪ್ಪುತ್ತಿದೆ. ಇದಕ್ಕೆ ನಮ್ಮ ಆಕ್ಷೇಪವಿದೆ’ ಎಂದು ಹೇಳಿದರು.</p>.<p>ನಿವೃತ್ತ ಐಪಿಎಸ್ ಅಧಿಕಾರಿ ಗೋಪಾಲ್ ಹೊಸೂರು, ಅಖಿಲ ಭಾರತ ವಕೀಲರ ಒಕ್ಕೂಟದ ಅಧ್ಯಕ್ಷ ಎಸ್. ಶಂಕರಪ್ಪ ಚರ್ಚೆಯಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಮಾದಕ ವಸ್ತುಗಳ ಉತ್ಪಾದನೆ ಮತ್ತು ಬಳಕೆ ಮನುಕುಲಕ್ಕೆ ಕಂಟಕ. ಯುವ ಸಮೂಹ ಹೆಚ್ಚಾಗಿ ಈ ವ್ಯಸನಕ್ಕೆ ಬಲಿಯಾಗುತ್ತಿದೆ. ಡ್ರಗ್ಸ್ ಜಾಲ ನಿಯಂತ್ರಿಸಲು ರಾಜಕೀಯ ಇಚ್ಛಾಶಕ್ತಿಯ ಕೊರತೆ ಇದೆ’ ಎಂದು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್. ನಾಗಮೋಹನದಾಸ್ ಅಭಿಪ್ರಾಯಪಟ್ಟರು.</p>.<p>ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಮತ್ತು ಅಖಿಲ ಭಾರತ ವಕೀಲರ ಒಕ್ಕೂಟವು ‘ಮಾದಕ ವಸ್ತು– ಸಮಸ್ಯೆ, ಸವಾಲು, ಪರಿಹಾರ’ ಕುರಿತು ಭಾನುವಾರ ಹಮ್ಮಿಕೊಂಡಿದ್ದ ಆನ್ಲೈನ್ ವೆಬಿನಾರ್ನಲ್ಲಿ ಅವರು ಮಾತನಾಡಿದರು.</p>.<p>‘ಅಂದಾಜಿನ ಪ್ರಕಾರ, ದೇಶದಲ್ಲಿ ಜನ ದಿನಕ್ಕೆ 1 ಟನ್ ಹೆರಾಯಿನ್ ಬಳಸುತ್ತಿದ್ದು, ಇದರ ಮೌಲ್ಯ ₹100 ಕೋಟಿ. 100ಕ್ಕೂ ಹೆಚ್ಚು ಬಲಿಷ್ಠ ಮಾಫಿಯಾಗಳು ಈ ದಂಧೆಯಲ್ಲಿ ತೊಡಗಿವೆ. ಇವುಗಳನ್ನು ತಡೆಯಲು ಕಾನೂನುಗಳಿದ್ದರೂ ಅನುಷ್ಠಾನಕ್ಕೆ ರಾಜಕೀಯ ಇಚ್ಛಾಶಕ್ತಿ ಬೇಕು’ ಎಂದರು.</p>.<p>‘ಡ್ರಗ್ಸ್ ಸೇವಿಸುವ ವ್ಯಸನಿಗಳು ತಮ್ಮ ವೃತ್ತಿ ಜೀವನ, ಕೌಟುಂಬಿಕ ಜೀವನ ಹಾಗೂ ಮಾನಸಿಕ–ದೈಹಿಕ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಾರೆ. ಜಾಗತಿಕವಾಗಿ ವ್ಯಾಪಿಸಿರುವ ಈ ದಂಧೆಯನ್ನು ಅಂತರರಾಷ್ಟ್ರೀಯ ಸಂಬಂಧಗಳನ್ನು ಬಲಿಷ್ಠಗೊಳಿಸುವ ಮೂಲಕ ತಡೆಗಟ್ಟಬೇಕು’ ಎಂದು ಸಲಹೆ ನೀಡಿದರು.</p>.<p>ಹಿರಿಯ ಮನೋರೋಗ ತಜ್ಞ ಡಾ. ಸಿ.ಆರ್. ಚಂದ್ರಶೇಖರ್, ‘ಡ್ರಗ್ಸ್ ವ್ಯಾಮೋಹಕ್ಕೆ ತುತ್ತಾದವರು, ಒತ್ತಡಕ್ಕೆ ಒಳಗಾಗುತ್ತಾರೆ. ಅದು ಸಿಗದೇ ಇದ್ದಾಗ ತಮ್ಮ ಮೇಲೆಯೇ ನಿಯಂತ್ರಣ ಕಳೆದುಕೊಳ್ಳುತ್ತಾರೆ. ಇಂತಹ ಚಟ ಕಲಿಸುವವರಿಂದ ದೂರ ಉಳಿಯಬೇಕು. ವ್ಯಸನಿಗಳಿಗೆ ನಿಯಮಿತವಾಗಿ ಆಪ್ತ ಸಮಾಲೋಚನೆ ನಡೆಸಬೇಕು’ ಎಂದು ಹೇಳಿದರು.</p>.<p>ಸಂಘಟನೆಯ ಕೆ.ಎಸ್. ವಿಮಲಾ, ‘ಡ್ರಗ್ಸ್ ಜಾಲದಲ್ಲಿ ಯಾರೇ ಇದ್ದರೂ ತಪ್ಪು. ಆದರೆ, ಅಪರಾಧವನ್ನು ಸಾಬೀತು ಮಾಡುವ ದಾರಿಯು ತಾಳ ತಪ್ಪುತ್ತಿದೆ. ಇದಕ್ಕೆ ನಮ್ಮ ಆಕ್ಷೇಪವಿದೆ’ ಎಂದು ಹೇಳಿದರು.</p>.<p>ನಿವೃತ್ತ ಐಪಿಎಸ್ ಅಧಿಕಾರಿ ಗೋಪಾಲ್ ಹೊಸೂರು, ಅಖಿಲ ಭಾರತ ವಕೀಲರ ಒಕ್ಕೂಟದ ಅಧ್ಯಕ್ಷ ಎಸ್. ಶಂಕರಪ್ಪ ಚರ್ಚೆಯಲ್ಲಿ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>