‘ಗಾಂಜಾ ಮಾರಾಟದಲ್ಲಿ ಪಾಲುದಾರರಾಗಿದ್ದ ಚಂದ್ರಪ್ಪ ಹಾಗೂ ಮಾರಪ್ಪನ ಮಾಹಿತಿಯನ್ನು ಬುಡೆನ್ಸಾಬ್ ಬಾಯ್ಬಿಟ್ಟಿದ್ದ. ಜೊತೆಗೆ, ಆರ್.ಟಿ.ನಗರದ ಈರುಳ್ಳಿ ಮೈದಾನದಲ್ಲಿ ಹಸಿ ಗಾಂಜಾವನ್ನು ಒಣಗಿಸಲು ಹಾಕಿರುವುದಾಗಿಯೂ ತಿಳಿಸಿದ್ದ. ಮೈದಾನಕ್ಕೆ ಹೋಗಿ ಗಾಂಜಾವನ್ನು ಜಪ್ತಿ ಮಾಡಿ, ಆರೋಪಿಗಳನ್ನೂ ಬಂಧಿಸಲಾಯಿತು’ ಎಂದೂ ಪೊಲೀಸರು ಹೇಳಿದರು.