ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನಿಂದ ಗಾಂಜಾ ತಂದು ಮಾರುತ್ತಿದ್ದ ಇಬ್ಬರ ಸೆರೆ

Last Updated 23 ಡಿಸೆಂಬರ್ 2021, 19:33 IST
ಅಕ್ಷರ ಗಾತ್ರ

ಬೆಂಗಳೂರು: ಬಸ್‌, ರೈಲು ಮೊದಲಾದ ಸಾರ್ವಜನಿಕ ಸಾರಿಗೆ ಮೂಲಕತಮಿಳುನಾಡಿನಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇರ್ಫಾನ್‌ (24) ಹಾಗೂ ಉಲ್ಮಾಜ್‌ ಪಾಷಾ (27) ಎಂಬುವರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇವರಿಂದ 7 ಕೆ.ಜಿ.ಗಾಂಜಾ ಹಾಗೂ ಒಂದು ಆಟೊ ಜಪ್ತಿ ಮಾಡಲಾಗಿದೆ.

‘ಕೆಂಗೇರಿ ನಿವಾಸಿಗಳಾಗಿರುವ ಆರೋಪಿಗಳು ಆಟೊದಲ್ಲಿ ಗಾಂಜಾ ಇಟ್ಟುಕೊಂಡು ಕಾಲೇಜು ವಿದ್ಯಾರ್ಥಿಗಳು, ಯುವಕರು ಹಾಗೂ ಐ.ಟಿ.ಕಂಪನಿಗಳ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು. ಕೆಂಗೇರಿ ಮೆಟ್ರೊ ನಿಲ್ದಾಣದ ಬಳಿ ಅಪರಿಚಿತರು ಗಾಂಜಾ ಮಾರುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಅದರ ಆಧಾರದಲ್ಲಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಈ ಜಾಲದಲ್ಲಿ ಮತ್ತಿಬ್ಬರು ಭಾಗಿಯಾಗಿದ್ದು, ಅವರಿಗಾಗಿ ಹುಡುಕುತ್ತಿದ್ದೇವೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT