<p><strong>ಬೆಂಗಳೂರು: </strong>ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಮುಖ್ಯಮಂತ್ರಿ ಮನೆ ಭದ್ರತಾ ಸಿಬ್ಬಂದಿಗಳಿಬ್ಬರನ್ನು ನಗರದ ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.</p>.<p>‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರ್.ಟಿ.ನಗರದ ಮನೆ ಭದ್ರತೆ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ಟೆಬಲ್ ಸಂತೋಷ್ ಹಾಗೂ ಕಾನ್ಸ್ಟೆಬಲ್ ಶಿವಕುಮಾರ್ ಅವರನ್ನು ಡ್ರಗ್ಸ್ ಪ್ರಕರಣದಲ್ಲಿ ಇತ್ತೀಚೆಗೆ ಬಂಧಿಸಲಾಗಿತ್ತು. ಇದೀಗ ಅವರಿಬ್ಬರನ್ನು ಸಿಸಿಬಿ ವಿಚಾರಣೆ ನಡೆಸುತ್ತಿದೆ’ ಪೊಲೀಸ್ ಮೂಲಗಳು ಹೇಳಿವೆ.</p>.<p>‘ಆರ್.ಟಿ.ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಲೋಪ ಕಂಡುಬಂದಿತ್ತು. ಇನ್ಸ್ಪೆಕ್ಟರ್ ಹಾಗೂ ಪಿಎಸ್ಐ ಅವರನ್ನು ಅಮಾನತು ಸಹ ಮಾಡಲಾಗಿತ್ತು. ಇದೇ ಪ್ರಕರಣದ ತನಿಖೆಯನ್ನು ಸಿಸಿಬಿ ಕೈಗೆತ್ತಿಕೊಂಡಿದೆ‘ ಎಂದೂ ತಿಳಿಸಿವೆ.</p>.<p>‘ಆಟೊದಲ್ಲಿ ಡ್ರಗ್ಸ್ ತುಂಬಿಕೊಂಡು ಚಾಲಕ, ಆರ್.ಟಿ.ನಗರದಲ್ಲಿದ್ದ ಸಂತೋಷ್ ಹಾಗೂ ಶಿವಕುಮಾರ್ ಬಳಿ ಬಂದಿದ್ದ. ಅದೇ ಸಂದರ್ಭದಲ್ಲೇ ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ, ಪೊಲೀಸರಿಬ್ಬರು ಸೇರಿ ನಾಲ್ವರನ್ನು ಬಂಧಿಸಿದ್ದರು. ಆಟೊವನ್ನೂ ಜಪ್ತಿ ಮಾಡಿದ್ದರು‘ ಎಂದೂ ಹೇಳಿವೆ.</p>.<p>‘ಇದೇ ಆರೋಪಿಗಳ ವಿರುದ್ಧ ಕೋರಮಂಗಲ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಅದರ ತನಿಖೆಯೂ ಸಿಸಿಬಿಗೆ ವರ್ಗವಾಗುವ ಸಾಧ್ಯತೆ ಇದೆ‘ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಮುಖ್ಯಮಂತ್ರಿ ಮನೆ ಭದ್ರತಾ ಸಿಬ್ಬಂದಿಗಳಿಬ್ಬರನ್ನು ನಗರದ ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.</p>.<p>‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರ್.ಟಿ.ನಗರದ ಮನೆ ಭದ್ರತೆ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ಟೆಬಲ್ ಸಂತೋಷ್ ಹಾಗೂ ಕಾನ್ಸ್ಟೆಬಲ್ ಶಿವಕುಮಾರ್ ಅವರನ್ನು ಡ್ರಗ್ಸ್ ಪ್ರಕರಣದಲ್ಲಿ ಇತ್ತೀಚೆಗೆ ಬಂಧಿಸಲಾಗಿತ್ತು. ಇದೀಗ ಅವರಿಬ್ಬರನ್ನು ಸಿಸಿಬಿ ವಿಚಾರಣೆ ನಡೆಸುತ್ತಿದೆ’ ಪೊಲೀಸ್ ಮೂಲಗಳು ಹೇಳಿವೆ.</p>.<p>‘ಆರ್.ಟಿ.ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಯನ್ನು ಲೋಪ ಕಂಡುಬಂದಿತ್ತು. ಇನ್ಸ್ಪೆಕ್ಟರ್ ಹಾಗೂ ಪಿಎಸ್ಐ ಅವರನ್ನು ಅಮಾನತು ಸಹ ಮಾಡಲಾಗಿತ್ತು. ಇದೇ ಪ್ರಕರಣದ ತನಿಖೆಯನ್ನು ಸಿಸಿಬಿ ಕೈಗೆತ್ತಿಕೊಂಡಿದೆ‘ ಎಂದೂ ತಿಳಿಸಿವೆ.</p>.<p>‘ಆಟೊದಲ್ಲಿ ಡ್ರಗ್ಸ್ ತುಂಬಿಕೊಂಡು ಚಾಲಕ, ಆರ್.ಟಿ.ನಗರದಲ್ಲಿದ್ದ ಸಂತೋಷ್ ಹಾಗೂ ಶಿವಕುಮಾರ್ ಬಳಿ ಬಂದಿದ್ದ. ಅದೇ ಸಂದರ್ಭದಲ್ಲೇ ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ, ಪೊಲೀಸರಿಬ್ಬರು ಸೇರಿ ನಾಲ್ವರನ್ನು ಬಂಧಿಸಿದ್ದರು. ಆಟೊವನ್ನೂ ಜಪ್ತಿ ಮಾಡಿದ್ದರು‘ ಎಂದೂ ಹೇಳಿವೆ.</p>.<p>‘ಇದೇ ಆರೋಪಿಗಳ ವಿರುದ್ಧ ಕೋರಮಂಗಲ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಅದರ ತನಿಖೆಯೂ ಸಿಸಿಬಿಗೆ ವರ್ಗವಾಗುವ ಸಾಧ್ಯತೆ ಇದೆ‘ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>