ಬೆಂಗಳೂರು: ಡ್ರಗ್ಸ್ ಪ್ರಕರಣ ತನಿಖೆಯ ಮಾಹಿತಿ ಸೋರಿಕೆ ಮಾಡಿರುವ ಆರೋಪದಡಿ ಸಿಸಿಬಿಯ ಮಹಿಳಾ ಸಂರಕ್ಷಣಾ ಘಟಕದ ಎಸಿಪಿ ಮುಧವಿ ಅವರನ್ನು ಅಮಾನತು ಮಾಡಲಾಗಿದೆ.
ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ವಿರೇನ್ ಖನ್ನಾಗೆ ಪೇದೆ ಮಲ್ಲಿಕಾರ್ಜುನ್ ಅವರಿಂದ ರಾತ್ರಿ ವೇಳೆ ಮೊಬೈಲ್ ನೀಡಿ ಸಹಕರಿಸಿದ್ದರು. ಖನ್ನಾ ಬಳಿ 50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.
ಪ್ರಕರಣದ ತನಿಖೆ ನಡೆಯುತ್ತಿದ್ದ ಸಮಯದಲ್ಲಿ ಆರೋಪಿಗಳು ಹಾಗೂ ಅವರ ಸಹಚರರೊಂದಿಗೆ ಮುಧವಿ ಸಂಪರ್ಕದಲ್ಲಿದ್ದರು. ತನಿಖೆಯ ಮಾಹಿತಿ ಸೋರಿಕೆ ಮಾಡುತ್ತಿರುವುದಾಗಿ ತಿಳಿದು ಬಂದಿದ್ದು, ಮುಧವಿ ಹಾಗೂ ಪೇದೆ ಮಲ್ಲಿಕಾರ್ಜುನ್ ಇಬ್ಬರನ್ನೂ ಅಮಾನತು ಮಾಡಲಾಗಿದೆ.