<p><strong>ಬೆಂಗಳೂರು:</strong> ಅಂತರರಾಷ್ಟ್ರೀಯ ಡ್ರಗ್ಸ್ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದು ಬಚಾವಾಗಿದ್ದ ಆರೋಪಿ ಭಟ್ಕಳದ ಶರೀಫ್ ಹಸನ್ ಮಸೂರಿ ಅಲಿಯಾಸ್ ಮ್ಯಾಶಿಯನ್ನು, ಮತ್ತೊಂದು ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.</p>.<p>‘ಡ್ರಗ್ಸ್ ಪ್ರಕರಣದಲ್ಲಿ 19ನೇ ಆರೋಪಿ ಆಗಿದ್ದ ಮ್ಯಾಶಿ, ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ. ನಿರೀಕ್ಷಣಾ ಜಾಮೀನು ಪಡೆದು ಬಂಧನದಿಂದ ತಪ್ಪಿಸಿಕೊಂಡಿದ್ದ. ಆದರೆ, ಆತನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ತಲೆಮರೆಸಿಕೊಂಡಿದ್ದ’ ಎಂದು ಸಿಸಿಬಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಮಂಗಳವಾರ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹೆಚ್ಚಿನ ವಿಚಾರಣೆಗಾಗಿ 14 ದಿನ ಆತನನ್ನು ಕಸ್ಟಡಿಗೆ ಪಡೆಯಲಾಗಿದೆ’ ಎಂದೂ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಆರೋಪಿ ಆದಿತ್ಯ ಆಳ್ವ ಸ್ನೇಹಿತನಾಗಿದ್ದ ಮ್ಯಾಶಿ, 2016ರಿಂದಲೇ ಪಾರ್ಟಿಗಳಲ್ಲಿ ಡ್ರಗ್ಸ್ ಮಾರುತ್ತಿದ್ದ. ಶಿವಪ್ರಕಾಶ್, ರವಿಶಂಕರ್, ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ವೈಭವ್ಕುಮಾರ್ ಜೈನ್ ಹಾಗೂ ಇತರೆ ಆರೋಪಿಗಳ ಜೊತೆ ಒಟನಾಟವಿಟ್ಟುಕೊಂಡಿದ್ದ. ಅವರಿಗೆಲ್ಲ ಈತ ಡ್ರಗ್ಸ್ ಸರಬರಾಜು ಮಾಡಿದ್ದನೆಂಬುದು ತನಿಖೆಯಿಂದ ಗೊತ್ತಾಗಿತ್ತು’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಂತರರಾಷ್ಟ್ರೀಯ ಡ್ರಗ್ಸ್ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದು ಬಚಾವಾಗಿದ್ದ ಆರೋಪಿ ಭಟ್ಕಳದ ಶರೀಫ್ ಹಸನ್ ಮಸೂರಿ ಅಲಿಯಾಸ್ ಮ್ಯಾಶಿಯನ್ನು, ಮತ್ತೊಂದು ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.</p>.<p>‘ಡ್ರಗ್ಸ್ ಪ್ರಕರಣದಲ್ಲಿ 19ನೇ ಆರೋಪಿ ಆಗಿದ್ದ ಮ್ಯಾಶಿ, ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ. ನಿರೀಕ್ಷಣಾ ಜಾಮೀನು ಪಡೆದು ಬಂಧನದಿಂದ ತಪ್ಪಿಸಿಕೊಂಡಿದ್ದ. ಆದರೆ, ಆತನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ತಲೆಮರೆಸಿಕೊಂಡಿದ್ದ’ ಎಂದು ಸಿಸಿಬಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಮಂಗಳವಾರ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹೆಚ್ಚಿನ ವಿಚಾರಣೆಗಾಗಿ 14 ದಿನ ಆತನನ್ನು ಕಸ್ಟಡಿಗೆ ಪಡೆಯಲಾಗಿದೆ’ ಎಂದೂ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಆರೋಪಿ ಆದಿತ್ಯ ಆಳ್ವ ಸ್ನೇಹಿತನಾಗಿದ್ದ ಮ್ಯಾಶಿ, 2016ರಿಂದಲೇ ಪಾರ್ಟಿಗಳಲ್ಲಿ ಡ್ರಗ್ಸ್ ಮಾರುತ್ತಿದ್ದ. ಶಿವಪ್ರಕಾಶ್, ರವಿಶಂಕರ್, ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ವೈಭವ್ಕುಮಾರ್ ಜೈನ್ ಹಾಗೂ ಇತರೆ ಆರೋಪಿಗಳ ಜೊತೆ ಒಟನಾಟವಿಟ್ಟುಕೊಂಡಿದ್ದ. ಅವರಿಗೆಲ್ಲ ಈತ ಡ್ರಗ್ಸ್ ಸರಬರಾಜು ಮಾಡಿದ್ದನೆಂಬುದು ತನಿಖೆಯಿಂದ ಗೊತ್ತಾಗಿತ್ತು’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>