<p><strong>ಬೆಂಗಳೂರು:</strong> ಕೆಂಗೇರಿಯಲ್ಲಿ ಇತ್ತೀಚೆಗಷ್ಟೇ ₹ 30 ಕೋಟಿ ಮೌಲ್ಯದ ಮಾದಕ ವಸ್ತು ‘ಕೆಟಮಿನ್’ ಜಪ್ತಿ ಮಾಡಿದ್ದ ಎನ್ಸಿಬಿ ಅಧಿಕಾರಿಗಳು, ಪ್ರಕರಣದ ಆರೋಪಿಗಳು ನೀಡಿದ ಸುಳಿವಿನಿಂದ ಹೈದರಾಬಾದ್ನಲ್ಲಿ ಮತ್ತೆ ₹ 25 ಕೋಟಿ ಮೌಲ್ಯದ ಕೆಟಮಿನ್ ಜಪ್ತಿ ಮಾಡಿದ್ದಾರೆ.</p>.<p>‘ನಚಾರಾಂ ಕೈಗಾರಿಕೆ ಪ್ರದೇಶದಲ್ಲಿರುವ ‘ಇನ್ಕೆಮ್’ ಎಂಬ ಪ್ರಯೋಗಾಲಯದಲ್ಲಿ ಕೆಟಮಿನ್ ತಯಾರಿಸಲಾಗುತ್ತಿತ್ತು. ಪ್ರಯೊಗಾಲಯಕ್ಕೆ ದಾಳಿ ನಡೆಸಿ, ‘ಕೆಟಮಿನ್’ ಹಾಗೂ ಅದರ ತಯಾರಿಗೆ ಬಳಸುತ್ತಿದ್ದ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಎನ್ಸಿಬಿ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಕೆಂಗೇರಿಯ ಘಟಕವೊಂದರ ಮೇಲೆ ಏಪ್ರಿಲ್ 30ರಂದು ದಾಳಿ ಮಾಡಲಾಗಿತ್ತು. ಸ್ಥಳೀಯ ನಿವಾಸಿ ಶಿವರಾಜ್ ಅರಸ್ (36) ಹಾಗೂ ಚೆನ್ನೈನ ಜೆ. ಕಣ್ಣನ್ (31) ಎಂಬುವರನ್ನು ಬಂಧಿಸಲಾಗಿತ್ತು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಕೈದಿ ಪಿ.ವೆಂಕಟೇಶ್ವರಲು, ಇಲ್ಲಿದ್ದುಕೊಂಡೇ ನಚಾರಾಂನಲ್ಲಿ ನಡೆಸುತ್ತಿರುವ ಪ್ರಯೋಗಾಲಯದಲ್ಲಿ ಕೆಟಮಿನ್ ತಯಾರಿಸುವ ಕುರಿತು ಆರೋಪಿಗಳು ಮಾಹಿತಿ ನೀಡಿದ್ದರು’ ಎಂದು ವಿವರಿಸಿದರು.</p>.<p>‘2009ರಲ್ಲಿ ಮಾದಕ ವಸ್ತು ಸಾಗಣೆ ವೇಳೆ ಕೇಂದ್ರ ಕಂದಾಯ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದ ವೆಂಕಟೇಶ್ವರಲು ಜೈಲು ಪಾಲಾಗಿದ್ದ. ಜೈಲಿನಲ್ಲಿರುವ ಆತನನ್ನು ವಾರಂಟ್ ಮೇಲೆ ವಶಕ್ಕೆ ಪಡೆದು, ನಚಾರಾಂಗೆ ಕರೆದೊಯ್ದೆವು. ಆತನ ಸಮ್ಮುಖದಲ್ಲೇ ಪ್ರಯೋಗಾಲಯದ ಮೇಲೆ ದಾಳಿ ನಡೆಸಿದೆವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನ್ಯಾಯಾಲಯಕ್ಕೆ ಆತನನ್ನು ಬುಧವಾರ ಹಾಜರುಪಡಿಸಲಾಗುವುದು’ ಎಂದರು.</p>.<p>‘ಪ್ರಯೋಗಾಲಯದಲ್ಲಿ ಎಂಟು ಮಂದಿ ಕಾಯಂ ನೌಕರರಿದ್ದರು. 17 ಕೆಲಸಗಾರರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿತ್ತು. ಕರೆದಾಗ ವಿಚಾರಣೆಗೆ ಬರುವಂತೆ ಹೇಳಿ, ಕೆಲಸಗಾರರನ್ನು ಬಿಟ್ಟು ಕಳುಹಿಸಲಾಗಿದೆ’ ಎಂದು ಅಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆಂಗೇರಿಯಲ್ಲಿ ಇತ್ತೀಚೆಗಷ್ಟೇ ₹ 30 ಕೋಟಿ ಮೌಲ್ಯದ ಮಾದಕ ವಸ್ತು ‘ಕೆಟಮಿನ್’ ಜಪ್ತಿ ಮಾಡಿದ್ದ ಎನ್ಸಿಬಿ ಅಧಿಕಾರಿಗಳು, ಪ್ರಕರಣದ ಆರೋಪಿಗಳು ನೀಡಿದ ಸುಳಿವಿನಿಂದ ಹೈದರಾಬಾದ್ನಲ್ಲಿ ಮತ್ತೆ ₹ 25 ಕೋಟಿ ಮೌಲ್ಯದ ಕೆಟಮಿನ್ ಜಪ್ತಿ ಮಾಡಿದ್ದಾರೆ.</p>.<p>‘ನಚಾರಾಂ ಕೈಗಾರಿಕೆ ಪ್ರದೇಶದಲ್ಲಿರುವ ‘ಇನ್ಕೆಮ್’ ಎಂಬ ಪ್ರಯೋಗಾಲಯದಲ್ಲಿ ಕೆಟಮಿನ್ ತಯಾರಿಸಲಾಗುತ್ತಿತ್ತು. ಪ್ರಯೊಗಾಲಯಕ್ಕೆ ದಾಳಿ ನಡೆಸಿ, ‘ಕೆಟಮಿನ್’ ಹಾಗೂ ಅದರ ತಯಾರಿಗೆ ಬಳಸುತ್ತಿದ್ದ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಎನ್ಸಿಬಿ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಕೆಂಗೇರಿಯ ಘಟಕವೊಂದರ ಮೇಲೆ ಏಪ್ರಿಲ್ 30ರಂದು ದಾಳಿ ಮಾಡಲಾಗಿತ್ತು. ಸ್ಥಳೀಯ ನಿವಾಸಿ ಶಿವರಾಜ್ ಅರಸ್ (36) ಹಾಗೂ ಚೆನ್ನೈನ ಜೆ. ಕಣ್ಣನ್ (31) ಎಂಬುವರನ್ನು ಬಂಧಿಸಲಾಗಿತ್ತು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಕೈದಿ ಪಿ.ವೆಂಕಟೇಶ್ವರಲು, ಇಲ್ಲಿದ್ದುಕೊಂಡೇ ನಚಾರಾಂನಲ್ಲಿ ನಡೆಸುತ್ತಿರುವ ಪ್ರಯೋಗಾಲಯದಲ್ಲಿ ಕೆಟಮಿನ್ ತಯಾರಿಸುವ ಕುರಿತು ಆರೋಪಿಗಳು ಮಾಹಿತಿ ನೀಡಿದ್ದರು’ ಎಂದು ವಿವರಿಸಿದರು.</p>.<p>‘2009ರಲ್ಲಿ ಮಾದಕ ವಸ್ತು ಸಾಗಣೆ ವೇಳೆ ಕೇಂದ್ರ ಕಂದಾಯ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದ ವೆಂಕಟೇಶ್ವರಲು ಜೈಲು ಪಾಲಾಗಿದ್ದ. ಜೈಲಿನಲ್ಲಿರುವ ಆತನನ್ನು ವಾರಂಟ್ ಮೇಲೆ ವಶಕ್ಕೆ ಪಡೆದು, ನಚಾರಾಂಗೆ ಕರೆದೊಯ್ದೆವು. ಆತನ ಸಮ್ಮುಖದಲ್ಲೇ ಪ್ರಯೋಗಾಲಯದ ಮೇಲೆ ದಾಳಿ ನಡೆಸಿದೆವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನ್ಯಾಯಾಲಯಕ್ಕೆ ಆತನನ್ನು ಬುಧವಾರ ಹಾಜರುಪಡಿಸಲಾಗುವುದು’ ಎಂದರು.</p>.<p>‘ಪ್ರಯೋಗಾಲಯದಲ್ಲಿ ಎಂಟು ಮಂದಿ ಕಾಯಂ ನೌಕರರಿದ್ದರು. 17 ಕೆಲಸಗಾರರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿತ್ತು. ಕರೆದಾಗ ವಿಚಾರಣೆಗೆ ಬರುವಂತೆ ಹೇಳಿ, ಕೆಲಸಗಾರರನ್ನು ಬಿಟ್ಟು ಕಳುಹಿಸಲಾಗಿದೆ’ ಎಂದು ಅಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>