<p><strong>ಬೆಂಗಳೂರು: </strong>ಗೊಂಬೆಯಲ್ಲಿ ಡ್ರಗ್ಸ್ ಬಚ್ಚಿಟ್ಟು ಸಾಗಿಸುತ್ತಿದ್ದ ಆರೋಪದಡಿ ಬಂಧಿಸಲಾಗಿರುವ ಸಾಕೀರ್ ಹುಸೇನ್ ಚೌಧರಿ (34), ಬಾಂಗ್ಲಾದೇಶದ ಗಡಿಯಿಂದ ಡ್ರಗ್ಸ್ ತರುತ್ತಿದ್ದ ಸಂಗತಿ ಪೊಲೀಸರ ತನಿಖೆಯಿಂದ ಬಯಲಾಗಿದೆ.</p>.<p>‘ವೃತ್ತಿಯಲ್ಲಿ ಚಾಲಕರಾಗಿದ್ದ ಸಾಕೀರ್ ಹುಸೇನ್, ಅಸ್ಸಾಂನ ಹೈಲಾಗಂದಿ ಜಿಲ್ಲೆಯ ನಿವಾಸಿ. 5 ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಲಾಕ್ಡೌನ್ನಿಂದಾಗಿ ಕೆಲಸ ಕಡಿಮೆ ಆಗಿತ್ತು. ತಮ್ಮ ದುಶ್ಚಟಗಳಿಗೆ ಹಣ ಸಾಕಾಗಿರಲಿಲ್ಲ. ಅದೇ ಕಾರಣಕ್ಕೆ ಡ್ರಗ್ಸ್ ಮಾರಾಟ ಮಾಡಲಾರಂಭಿಸಿದ್ದರು’ ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ ಮುರುಗನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಪತ್ನಿ ಹಾಗೂ ಮಕ್ಕಳ ಜೊತೆಯಲ್ಲಿ ಪ್ರವಾಸದ ನೆಪದಲ್ಲಿ ಬಾಂಗ್ಲಾದೇಶದ ಗಡಿಗೆ ಹೋಗುತ್ತಿದ್ದ<br />ಆರೋಪಿ, ಅಲ್ಲಿಯೇ ಪೆಡ್ಲರ್ಗಳಿಂದ ಡ್ರಗ್ಸ್ಖರೀದಿಸುತ್ತಿದ್ದರು. ನಂತರ,ತಮ್ಮೂರಿಗೆ ಹೋಗುತ್ತಿದ್ದರು. ಬಳಿಕ ಗೊಂಬೆ ಹಾಗೂ ಆಟಿಕೆ ಸಾಮಗ್ರಿಗಳಲ್ಲಿ ಡ್ರಗ್ಸ್ ಬಚ್ಚಿಟ್ಟುಕೊಂಡು ಬೆಂಗಳೂರಿಗೆ ಬರುತ್ತಿದ್ದರು. ಪೊಲೀಸರು ಯಾರಾದರೂ ತಡೆದರೆ, ತಾವು ಪ್ರವಾಸಕ್ಕೆ ಹೊರಟಿರುವುದಾಗಿ ಸುಳ್ಳು ಹೇಳುತ್ತಿದ್ದರು’ ಎಂದೂ ಹೇಳಿದರು.</p>.<p>‘ಡಿ. 3ರಂದು ಸಂಜೆಹಳೇ ಮದ್ರಾಸ್ ರಸ್ತೆಯ ಎಂ.ವಿ.ಗಾರ್ಡನ್ ಬಳಿ ಆರೋಪಿ ಕಾರನ್ನು ಪೊಲೀಸರು ತಡೆದು ತಪಾಸಣೆ ನಡೆಸಿದ್ದರು. ಅವಾಗಲೇ ಆರೋಪಿ ಸಿಕ್ಕಿಬಿದ್ದಿದ್ದಾರೆ. ಅವರಿಂದ ₹ 28 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ.’</p>.<p>‘ತಮ್ಮ ಮನೆಯಲ್ಲಿ ಡ್ರಗ್ಸ್ಸಂಗ್ರಹಿಸಿಟ್ಟುಕೊಳ್ಳುತ್ತಿದ್ದ ಆರೋಪಿ, ಕೆಲ ಶಾಲಾ–ಕಾಲೇಜು ವಿದ್ಯಾರ್ಥಿಗಳು, ಖಾಸಗಿ ಕಂಪನಿ ಉದ್ಯೋಗಿಗಳಿಗೆ ಮಾರುತ್ತಿದ್ದರು’ ಎಂದೂ ಅವರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಗೊಂಬೆಯಲ್ಲಿ ಡ್ರಗ್ಸ್ ಬಚ್ಚಿಟ್ಟು ಸಾಗಿಸುತ್ತಿದ್ದ ಆರೋಪದಡಿ ಬಂಧಿಸಲಾಗಿರುವ ಸಾಕೀರ್ ಹುಸೇನ್ ಚೌಧರಿ (34), ಬಾಂಗ್ಲಾದೇಶದ ಗಡಿಯಿಂದ ಡ್ರಗ್ಸ್ ತರುತ್ತಿದ್ದ ಸಂಗತಿ ಪೊಲೀಸರ ತನಿಖೆಯಿಂದ ಬಯಲಾಗಿದೆ.</p>.<p>‘ವೃತ್ತಿಯಲ್ಲಿ ಚಾಲಕರಾಗಿದ್ದ ಸಾಕೀರ್ ಹುಸೇನ್, ಅಸ್ಸಾಂನ ಹೈಲಾಗಂದಿ ಜಿಲ್ಲೆಯ ನಿವಾಸಿ. 5 ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಲಾಕ್ಡೌನ್ನಿಂದಾಗಿ ಕೆಲಸ ಕಡಿಮೆ ಆಗಿತ್ತು. ತಮ್ಮ ದುಶ್ಚಟಗಳಿಗೆ ಹಣ ಸಾಕಾಗಿರಲಿಲ್ಲ. ಅದೇ ಕಾರಣಕ್ಕೆ ಡ್ರಗ್ಸ್ ಮಾರಾಟ ಮಾಡಲಾರಂಭಿಸಿದ್ದರು’ ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ ಮುರುಗನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಪತ್ನಿ ಹಾಗೂ ಮಕ್ಕಳ ಜೊತೆಯಲ್ಲಿ ಪ್ರವಾಸದ ನೆಪದಲ್ಲಿ ಬಾಂಗ್ಲಾದೇಶದ ಗಡಿಗೆ ಹೋಗುತ್ತಿದ್ದ<br />ಆರೋಪಿ, ಅಲ್ಲಿಯೇ ಪೆಡ್ಲರ್ಗಳಿಂದ ಡ್ರಗ್ಸ್ಖರೀದಿಸುತ್ತಿದ್ದರು. ನಂತರ,ತಮ್ಮೂರಿಗೆ ಹೋಗುತ್ತಿದ್ದರು. ಬಳಿಕ ಗೊಂಬೆ ಹಾಗೂ ಆಟಿಕೆ ಸಾಮಗ್ರಿಗಳಲ್ಲಿ ಡ್ರಗ್ಸ್ ಬಚ್ಚಿಟ್ಟುಕೊಂಡು ಬೆಂಗಳೂರಿಗೆ ಬರುತ್ತಿದ್ದರು. ಪೊಲೀಸರು ಯಾರಾದರೂ ತಡೆದರೆ, ತಾವು ಪ್ರವಾಸಕ್ಕೆ ಹೊರಟಿರುವುದಾಗಿ ಸುಳ್ಳು ಹೇಳುತ್ತಿದ್ದರು’ ಎಂದೂ ಹೇಳಿದರು.</p>.<p>‘ಡಿ. 3ರಂದು ಸಂಜೆಹಳೇ ಮದ್ರಾಸ್ ರಸ್ತೆಯ ಎಂ.ವಿ.ಗಾರ್ಡನ್ ಬಳಿ ಆರೋಪಿ ಕಾರನ್ನು ಪೊಲೀಸರು ತಡೆದು ತಪಾಸಣೆ ನಡೆಸಿದ್ದರು. ಅವಾಗಲೇ ಆರೋಪಿ ಸಿಕ್ಕಿಬಿದ್ದಿದ್ದಾರೆ. ಅವರಿಂದ ₹ 28 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ.’</p>.<p>‘ತಮ್ಮ ಮನೆಯಲ್ಲಿ ಡ್ರಗ್ಸ್ಸಂಗ್ರಹಿಸಿಟ್ಟುಕೊಳ್ಳುತ್ತಿದ್ದ ಆರೋಪಿ, ಕೆಲ ಶಾಲಾ–ಕಾಲೇಜು ವಿದ್ಯಾರ್ಥಿಗಳು, ಖಾಸಗಿ ಕಂಪನಿ ಉದ್ಯೋಗಿಗಳಿಗೆ ಮಾರುತ್ತಿದ್ದರು’ ಎಂದೂ ಅವರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>