<p><strong>ಬೆಂಗಳೂರು:</strong> ನಗರ ಸಂಚಾರ ವಿಭಾಗದ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ಮದ್ಯ ಸೇವಿಸಿ ವಾಹನ ಚಾಲನೆ ಹಾಗೂ ಅತಿ ವೇಗದ ಚಾಲನೆ ಮಾಡಿದ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. <br><br>ನಗರದ 50 ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಂದು ವಾರದಲ್ಲಿ 95,179 ವಾಹನ ಚಾಲಕರನ್ನು ತಪಾಸಣೆಗೊಳಪಡಿಸಲಾಗಿದ್ದು, ಆ ಪೈಕಿ ಪಾನಮತ್ತರಾಗಿದ್ದ 1,187 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.</p>.<p>165 ವಾಹನ ಚಾಲಕರ ವಿರುದ್ಧ ಅತಿ ವೇಗದ ಚಾಲನೆಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅವರಿಂದ ₹ 1.65 ಲಕ್ಷ ದಂಡ ಸಂಗ್ರಹಿಸಲಾಗಿದೆ.</p>.<p>ವರ್ಷಾಚರಣೆಯಲ್ಲಿ ಮದ್ಯ, ಮಾದಕ ದ್ರವ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡುವವರ ಪತ್ತೆಗೆ ನಗರದ ವಿವಿಧ ಸ್ಥಳಗಳಲ್ಲಿ ಪರಿಶೀಲನೆಗೆ ‘ಚೆಕ್ ಪಾಯಿಂಟ್’ಗಳನ್ನು ನಿರ್ಮಿಸಲಾಗಿದೆ.</p>.<p>ಅತಿ ವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡುವ ಹಾಗೂ ವ್ಹೀಲಿ, ಡ್ರ್ಯಾಗ್ ರೇಸ್ನಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಂಚಾರ ಪೊಲೀಸ್ ವಿಭಾಗದ ಜಂಟಿ ಕಮಿಷನರ್ ಎಂ. ಎನ್. ಅನುಚೇತ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರ ಸಂಚಾರ ವಿಭಾಗದ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ಮದ್ಯ ಸೇವಿಸಿ ವಾಹನ ಚಾಲನೆ ಹಾಗೂ ಅತಿ ವೇಗದ ಚಾಲನೆ ಮಾಡಿದ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. <br><br>ನಗರದ 50 ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಂದು ವಾರದಲ್ಲಿ 95,179 ವಾಹನ ಚಾಲಕರನ್ನು ತಪಾಸಣೆಗೊಳಪಡಿಸಲಾಗಿದ್ದು, ಆ ಪೈಕಿ ಪಾನಮತ್ತರಾಗಿದ್ದ 1,187 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.</p>.<p>165 ವಾಹನ ಚಾಲಕರ ವಿರುದ್ಧ ಅತಿ ವೇಗದ ಚಾಲನೆಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅವರಿಂದ ₹ 1.65 ಲಕ್ಷ ದಂಡ ಸಂಗ್ರಹಿಸಲಾಗಿದೆ.</p>.<p>ವರ್ಷಾಚರಣೆಯಲ್ಲಿ ಮದ್ಯ, ಮಾದಕ ದ್ರವ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡುವವರ ಪತ್ತೆಗೆ ನಗರದ ವಿವಿಧ ಸ್ಥಳಗಳಲ್ಲಿ ಪರಿಶೀಲನೆಗೆ ‘ಚೆಕ್ ಪಾಯಿಂಟ್’ಗಳನ್ನು ನಿರ್ಮಿಸಲಾಗಿದೆ.</p>.<p>ಅತಿ ವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡುವ ಹಾಗೂ ವ್ಹೀಲಿ, ಡ್ರ್ಯಾಗ್ ರೇಸ್ನಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಂಚಾರ ಪೊಲೀಸ್ ವಿಭಾಗದ ಜಂಟಿ ಕಮಿಷನರ್ ಎಂ. ಎನ್. ಅನುಚೇತ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>