<p><strong>ಬೆಂಗಳೂರು</strong>: ಕೋರಮಂಗಲದ ಜ್ಯೋತಿ ನಿವಾಸ್ ಕಾಲೇಜು ಎದುರಿನ ರಸ್ತೆಯಲ್ಲಿ ಮದ್ಯದ ಅಮಲಿನಲ್ಲಿ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದು, ಪೊಲೀಸ್ ಕಾನ್ಸ್ಟೆಬಲ್ ಮೇಲೆ ಕಾರು ಹತ್ತಿಸಲು ಯತ್ನಿಸಿದ ಚಾಲಕನನ್ನು ಆಡುಗೋಡಿ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.</p>.<p>ಕಾರು ಚಾಲಕ ನಂದುಕೃಷ್ಣ ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.<br>ಭಾನುವಾರ ತಡರಾತ್ರಿ 1.30ರ ಸುಮಾರಿಗೆ ಘಟನೆ ನಡೆದಿದೆ.</p>.<p>‘ಮದ್ಯದ ಅಮಲಿನಲ್ಲಿ ಚಾಲಕ ಅಜಾಗರೂಕತೆಯಿಂದ ಏಕಮುಖ ಸಂಚಾರದ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಕಾರು ಚಲಾಯಿಸಿಕೊಂಡು ಬರುತ್ತಿದ್ದ. ಅದನ್ನು ಗಮನಿಸಿದ ಕರ್ತವ್ಯನಿರತ ಪೊಲೀಸರು ಕಾರನ್ನು ತಡೆಯಲು ಯತ್ನಿಸಿದ್ದರು. ಈ ವೇಳೆ ಕಾರು ನಿಲ್ಲಿಸದೆ, ರಸ್ತೆಯಲ್ಲಿ ಅಡ್ಡಹಾಕಿದ್ದ ಬ್ಯಾರಿಕೇಡ್ಗೆ ಕಾರಿನಿಂದ ಡಿಕ್ಕಿ ಹೊಡೆದಿದ್ದಾನೆ. ಅದಾದ ಮೇಲೆ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆಯಲು ಯತ್ನಿಸಿದ್ದಾನೆ. ಕಾನ್ಸ್ಟೆಬಲ್ ಬಿ.ಎನ್.ಶ್ರೀನಿವಾಸ್ ಅವರ ಮೇಲೆ ಕಾರು ಹತ್ತಿಸಲು ಯತ್ನಿಸಿದ್ದಾನೆ’ ಎಂದು ಪೊಲೀಸರು ಹೇಳಿದರು.</p>.<p>‘ಘಟನೆಯಲ್ಲಿ ಕೋರಮಂಗಲ ಠಾಣೆಯ ಬಿ.ಎನ್.ಶ್ರೀನಿವಾಸ್ ಅವರು ಗಾಯಗೊಂಡಿದ್ದಾರೆ. ಬಲಗಾಲಿನ ಮಂಡಿ, ಎಡಗಾಲಿನ ಪಾದಕ್ಕೆ ಗಾಯವಾಗಿದೆ. ಗಾಯಾಳು ಶ್ರೀನಿವಾಸ್ ಅವರನ್ನು ಅಕ್ಯೂರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಘಟನೆಯ ಬಳಿಕ ಕಾರಿನ ಬಾಗಿಲು ತೆರೆಯದೇ ಆರೋಪಿ ಒಳಗೇ ಕುಳಿತಿದ್ದ. ಕಾರಿನ ಗಾಜನ್ನು ಪೊಲೀಸರೇ ಒಡೆದು ಆತನನ್ನು ಹೊರಗೆ ಎಳೆದು ತಂದರು’ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<h2>ಪಾರ್ಟಿಗೆ ತೆರಳಿದ್ದ ಆರೋಪಿ: </h2><p>ತಡರಾತ್ರಿ ಪಾರ್ಟಿ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಚಾಲಕ ಈ ವರ್ತನೆ ತೋರಿದ್ದಾನೆ ಎಂದು ಗೊತ್ತಾಗಿದೆ. ಚಾಲಕ ವಿಪರೀತ ಮದ್ಯ ಸೇವನೆ ಮಾಡಿದ್ದರಿಂದ ಪ್ರಜ್ಞೆಯೇ ಇರಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋರಮಂಗಲದ ಜ್ಯೋತಿ ನಿವಾಸ್ ಕಾಲೇಜು ಎದುರಿನ ರಸ್ತೆಯಲ್ಲಿ ಮದ್ಯದ ಅಮಲಿನಲ್ಲಿ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದು, ಪೊಲೀಸ್ ಕಾನ್ಸ್ಟೆಬಲ್ ಮೇಲೆ ಕಾರು ಹತ್ತಿಸಲು ಯತ್ನಿಸಿದ ಚಾಲಕನನ್ನು ಆಡುಗೋಡಿ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.</p>.<p>ಕಾರು ಚಾಲಕ ನಂದುಕೃಷ್ಣ ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.<br>ಭಾನುವಾರ ತಡರಾತ್ರಿ 1.30ರ ಸುಮಾರಿಗೆ ಘಟನೆ ನಡೆದಿದೆ.</p>.<p>‘ಮದ್ಯದ ಅಮಲಿನಲ್ಲಿ ಚಾಲಕ ಅಜಾಗರೂಕತೆಯಿಂದ ಏಕಮುಖ ಸಂಚಾರದ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಕಾರು ಚಲಾಯಿಸಿಕೊಂಡು ಬರುತ್ತಿದ್ದ. ಅದನ್ನು ಗಮನಿಸಿದ ಕರ್ತವ್ಯನಿರತ ಪೊಲೀಸರು ಕಾರನ್ನು ತಡೆಯಲು ಯತ್ನಿಸಿದ್ದರು. ಈ ವೇಳೆ ಕಾರು ನಿಲ್ಲಿಸದೆ, ರಸ್ತೆಯಲ್ಲಿ ಅಡ್ಡಹಾಕಿದ್ದ ಬ್ಯಾರಿಕೇಡ್ಗೆ ಕಾರಿನಿಂದ ಡಿಕ್ಕಿ ಹೊಡೆದಿದ್ದಾನೆ. ಅದಾದ ಮೇಲೆ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆಯಲು ಯತ್ನಿಸಿದ್ದಾನೆ. ಕಾನ್ಸ್ಟೆಬಲ್ ಬಿ.ಎನ್.ಶ್ರೀನಿವಾಸ್ ಅವರ ಮೇಲೆ ಕಾರು ಹತ್ತಿಸಲು ಯತ್ನಿಸಿದ್ದಾನೆ’ ಎಂದು ಪೊಲೀಸರು ಹೇಳಿದರು.</p>.<p>‘ಘಟನೆಯಲ್ಲಿ ಕೋರಮಂಗಲ ಠಾಣೆಯ ಬಿ.ಎನ್.ಶ್ರೀನಿವಾಸ್ ಅವರು ಗಾಯಗೊಂಡಿದ್ದಾರೆ. ಬಲಗಾಲಿನ ಮಂಡಿ, ಎಡಗಾಲಿನ ಪಾದಕ್ಕೆ ಗಾಯವಾಗಿದೆ. ಗಾಯಾಳು ಶ್ರೀನಿವಾಸ್ ಅವರನ್ನು ಅಕ್ಯೂರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಘಟನೆಯ ಬಳಿಕ ಕಾರಿನ ಬಾಗಿಲು ತೆರೆಯದೇ ಆರೋಪಿ ಒಳಗೇ ಕುಳಿತಿದ್ದ. ಕಾರಿನ ಗಾಜನ್ನು ಪೊಲೀಸರೇ ಒಡೆದು ಆತನನ್ನು ಹೊರಗೆ ಎಳೆದು ತಂದರು’ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<h2>ಪಾರ್ಟಿಗೆ ತೆರಳಿದ್ದ ಆರೋಪಿ: </h2><p>ತಡರಾತ್ರಿ ಪಾರ್ಟಿ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಚಾಲಕ ಈ ವರ್ತನೆ ತೋರಿದ್ದಾನೆ ಎಂದು ಗೊತ್ತಾಗಿದೆ. ಚಾಲಕ ವಿಪರೀತ ಮದ್ಯ ಸೇವನೆ ಮಾಡಿದ್ದರಿಂದ ಪ್ರಜ್ಞೆಯೇ ಇರಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>