‘ಆರೋಪಿ ಚಂದ್ರಶೇಖರ್, ‘ನಾನು ರಕ್ಷಣಾ ವೇದಿಕೆಯವನು. ನನ್ನನ್ನು ತಡೆಯುವವರು ಯಾರು?’ ಎಂದಿದ್ದರು. ಭದ್ರತಾ ಸಿಬ್ಬಂದಿಯ ಕಪಾಳಕ್ಕೆ ಹೊಡೆದು, ಹಲ್ಲೆ ಮಾಡಿದ್ದರು. ಸ್ಥಳದಲ್ಲಿದ್ದವರು ಜಗಳ ಬಿಡಿಸಿದ್ದರು. ಇದಾದ ನಂತರ ಭದ್ರತಾ ಸಿಬ್ಬಂದಿ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಚಂದ್ರಶೇಖರ್, ಸಾರ್ವಜನಿಕ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದಾಗಿ ದೂರಿದ್ದಾರೆ’ ಎಂದು ಮೂಲಗಳು ತಿಳಿಸಿವೆ.