<p><strong>ಬೆಂಗಳೂರು:</strong> ಅಮೃತಹಳ್ಳಿ ಬಳಿಯ ವೀರಣ್ಣನಪಾಳ್ಯದಲ್ಲಿ ಸೋಮವಾರ ರಾತ್ರಿ ಪಾನಮತ್ತ ಕಾರ್ಮಿಕರ ನಡುವೆ ನಡೆದ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ.</p>.<p>ರಾಜು (37) ಅವರನ್ನು ಕೊಲೆ ಮಾಡಿದ ಆರೋಪದ ಅಡಿ ಆರೋಪಿ ರಘು ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಜಾರ್ಖಂಡ್ ಮೂಲದ ರಾಜು ಮತ್ತು ರಘು, ವೀರಣ್ಣನಪಾಳ್ಯದ ನಿರ್ಮಾಣ ಹಂತದ ಕಟ್ಟಡದಲ್ಲಿ ಗ್ರಾನೈಟ್ ಹಾಕುವ ಕೆಲಸ ಮಾಡುತ್ತಿದ್ದರು. ಅವರಿಬ್ಬರೂ ಆ ಕಟ್ಟಡದ ಪಕ್ಕದ ತಾತ್ಕಾಲಿಕ ಶೆಡ್ನಲ್ಲಿ ವಾಸವಾಗಿದ್ದರು. ಸೋಮವಾರ ರಾತ್ರಿ ಇಬ್ಬರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿ ರಘು, ಮೃತ ರಾಜು ಅವರ ಪತ್ನಿಗೆ ಆಗಾಗ್ಗೆ ಕರೆ ಮಾಡಿ ಮಾತನಾಡುತ್ತಿದ್ದ. ಈ ವಿಚಾರಕ್ಕೆ ರಾಜು ಮತ್ತು ರಘು ನಡುವೆ ಜಗಳವಾಗಿದೆ. ಬಳಿಕ ಜಗಳ ವಿಕೋಪಕ್ಕೆ ತಿರುಗಿ ರಘು, ಚಾಕುವಿನಿಂದ ರಾಜು ಅವರ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ’ ಎಂದು ಪೊಲೀಸರು ಹೇಳಿದರು.</p>.<p>ಕೊಲೆ ಬಳಿಕ ಆರೋಪಿ ಜಾರ್ಖಂಡ್ಗೆ ಪರಾರಿಯಾಗಲು ರೈಲು ನಿಲ್ದಾಣಕ್ಕೆ ಹೋಗಿದ್ದ. ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ರೈಲು ನಿಲ್ದಾಣಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಪೊಲೀಸರು ಹೇಳಿದರು.</p>.<p>ಅಮೃತಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಮೃತಹಳ್ಳಿ ಬಳಿಯ ವೀರಣ್ಣನಪಾಳ್ಯದಲ್ಲಿ ಸೋಮವಾರ ರಾತ್ರಿ ಪಾನಮತ್ತ ಕಾರ್ಮಿಕರ ನಡುವೆ ನಡೆದ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ.</p>.<p>ರಾಜು (37) ಅವರನ್ನು ಕೊಲೆ ಮಾಡಿದ ಆರೋಪದ ಅಡಿ ಆರೋಪಿ ರಘು ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಜಾರ್ಖಂಡ್ ಮೂಲದ ರಾಜು ಮತ್ತು ರಘು, ವೀರಣ್ಣನಪಾಳ್ಯದ ನಿರ್ಮಾಣ ಹಂತದ ಕಟ್ಟಡದಲ್ಲಿ ಗ್ರಾನೈಟ್ ಹಾಕುವ ಕೆಲಸ ಮಾಡುತ್ತಿದ್ದರು. ಅವರಿಬ್ಬರೂ ಆ ಕಟ್ಟಡದ ಪಕ್ಕದ ತಾತ್ಕಾಲಿಕ ಶೆಡ್ನಲ್ಲಿ ವಾಸವಾಗಿದ್ದರು. ಸೋಮವಾರ ರಾತ್ರಿ ಇಬ್ಬರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿ ರಘು, ಮೃತ ರಾಜು ಅವರ ಪತ್ನಿಗೆ ಆಗಾಗ್ಗೆ ಕರೆ ಮಾಡಿ ಮಾತನಾಡುತ್ತಿದ್ದ. ಈ ವಿಚಾರಕ್ಕೆ ರಾಜು ಮತ್ತು ರಘು ನಡುವೆ ಜಗಳವಾಗಿದೆ. ಬಳಿಕ ಜಗಳ ವಿಕೋಪಕ್ಕೆ ತಿರುಗಿ ರಘು, ಚಾಕುವಿನಿಂದ ರಾಜು ಅವರ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ’ ಎಂದು ಪೊಲೀಸರು ಹೇಳಿದರು.</p>.<p>ಕೊಲೆ ಬಳಿಕ ಆರೋಪಿ ಜಾರ್ಖಂಡ್ಗೆ ಪರಾರಿಯಾಗಲು ರೈಲು ನಿಲ್ದಾಣಕ್ಕೆ ಹೋಗಿದ್ದ. ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ರೈಲು ನಿಲ್ದಾಣಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಪೊಲೀಸರು ಹೇಳಿದರು.</p>.<p>ಅಮೃತಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>