<p><strong>ಬೆಂಗಳೂರು</strong>: ‘ಅತಿಯಾದ ಮೊಬೈಲ್- ಕಂಪ್ಯೂಟರ್ ವೀಕ್ಷಣೆ, ವಾಯುಮಾಲಿನ್ಯ ಸೇರಿ ವಿವಿಧ ಕಾರಣಗಳಿಂದ ಒಣಕಣ್ಣು ಸಮಸ್ಯೆ ಹೆಚ್ಚುತ್ತಿದೆ. ಇದರಿಂದ ದೃಷ್ಟಿನಷ್ಟವಾಗುವ ಸಾಧ್ಯತೆಗಳಿವೆ’ ಎಂದು ನಾರಾಯಣ ನೇತ್ರಾಲಯದ ನಿರ್ದೇಶಕ ಡಾ.ರೋಹಿತ್ ಶೆಟ್ಟಿ ಹೇಳಿದರು.</p>.<p>ನಾರಾಯಣ ನೇತ್ರಾಲಯ ಐ ಫೌಂಡೇಶನ್ ವತಿಯಿಂದ ನಗರದಲ್ಲಿ ಶನಿವಾರ ಆಯೋಜಿದ್ದ ‘ಡ್ರೈ ಐ ಆ್ಯಂಡ್ ಓಕ್ಯುಲರ್ ಸರ್ಫೇಸ್ ಸೊಸೈಟಿ’ಯ (ಡಿಇಒಎಸ್ಎಸ್) ಮೂರನೇ ಕಾಂಗ್ರೆಸ್ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. </p>.<p>‘ಚಿಕಿತ್ಸೆ ನಿರ್ಲಕ್ಷಿಸಿದರೆ ದೈಹಿಕ ಕಿರಿಕಿರಿ ಉಂಟಾಗುತ್ತದೆ. ಅಷ್ಟೇ ಅಲ್ಲದೇ, ರೋಗಿಗಳು ಮಾನಸಿಕವಾಗಿಯೂ ದುರ್ಬಲರಾಗುವರು. ಸಕಾಲದಲ್ಲಿ ಚಿಕಿತ್ಸೆ ಪಡೆದರೆ ಗುಣಮುಖರಾಗಬಹುದು’ ಎಂದು ತಿಳಿಸಿದರು.</p>.<p>ಡಿಇಒಎಸ್ಎಸ್ ಕಾಂಗ್ರೆಸ್ ಅಧ್ಯಕ್ಷ ಸಿಹೆಮ್ ಲಾಜ್ರೆಗ್ ಮಾತನಾಡಿ, ‘ಥರ್ಮಲ್ ತಂತ್ರಜ್ಞಾನಗಳು, ಕೃತಕ ಬುದ್ಧಿಮತ್ತೆಯಂತಹ ಆಧುನಿಕ ರೋಗನಿರ್ಣಯ ವಿಧಾನಗಳ ಮೇಲೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಸಮಾವೇಶಗಳು ಜರುಗಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಸಿ. ಭಗವಾನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಅತಿಯಾದ ಮೊಬೈಲ್- ಕಂಪ್ಯೂಟರ್ ವೀಕ್ಷಣೆ, ವಾಯುಮಾಲಿನ್ಯ ಸೇರಿ ವಿವಿಧ ಕಾರಣಗಳಿಂದ ಒಣಕಣ್ಣು ಸಮಸ್ಯೆ ಹೆಚ್ಚುತ್ತಿದೆ. ಇದರಿಂದ ದೃಷ್ಟಿನಷ್ಟವಾಗುವ ಸಾಧ್ಯತೆಗಳಿವೆ’ ಎಂದು ನಾರಾಯಣ ನೇತ್ರಾಲಯದ ನಿರ್ದೇಶಕ ಡಾ.ರೋಹಿತ್ ಶೆಟ್ಟಿ ಹೇಳಿದರು.</p>.<p>ನಾರಾಯಣ ನೇತ್ರಾಲಯ ಐ ಫೌಂಡೇಶನ್ ವತಿಯಿಂದ ನಗರದಲ್ಲಿ ಶನಿವಾರ ಆಯೋಜಿದ್ದ ‘ಡ್ರೈ ಐ ಆ್ಯಂಡ್ ಓಕ್ಯುಲರ್ ಸರ್ಫೇಸ್ ಸೊಸೈಟಿ’ಯ (ಡಿಇಒಎಸ್ಎಸ್) ಮೂರನೇ ಕಾಂಗ್ರೆಸ್ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. </p>.<p>‘ಚಿಕಿತ್ಸೆ ನಿರ್ಲಕ್ಷಿಸಿದರೆ ದೈಹಿಕ ಕಿರಿಕಿರಿ ಉಂಟಾಗುತ್ತದೆ. ಅಷ್ಟೇ ಅಲ್ಲದೇ, ರೋಗಿಗಳು ಮಾನಸಿಕವಾಗಿಯೂ ದುರ್ಬಲರಾಗುವರು. ಸಕಾಲದಲ್ಲಿ ಚಿಕಿತ್ಸೆ ಪಡೆದರೆ ಗುಣಮುಖರಾಗಬಹುದು’ ಎಂದು ತಿಳಿಸಿದರು.</p>.<p>ಡಿಇಒಎಸ್ಎಸ್ ಕಾಂಗ್ರೆಸ್ ಅಧ್ಯಕ್ಷ ಸಿಹೆಮ್ ಲಾಜ್ರೆಗ್ ಮಾತನಾಡಿ, ‘ಥರ್ಮಲ್ ತಂತ್ರಜ್ಞಾನಗಳು, ಕೃತಕ ಬುದ್ಧಿಮತ್ತೆಯಂತಹ ಆಧುನಿಕ ರೋಗನಿರ್ಣಯ ವಿಧಾನಗಳ ಮೇಲೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಸಮಾವೇಶಗಳು ಜರುಗಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಸಿ. ಭಗವಾನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>