ಡಿಎಸ್ ಮ್ಯಾಕ್ಸ್ ಸಾಹಿತ್ಯ ಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಾಹಿತಿ ಶಾ.ಮಂ.ಕೃಷ್ಣರಾಯ, ‘ಕನ್ನಡ ಮನಸುಗಳನ್ನು ಒಟ್ಟುಗೂಡಿಸುವ ಕೆಲಸ ಮಹತ್ವದ್ದು. ಕನ್ನಡ ನಾಡಿನಲ್ಲಿ ಬೇರೆ ಭಾಷೆಯವರು ಇದ್ದಾರೆ. ಅವರು ಕೂಡ ಕನ್ನಡವನ್ನು ಬೆಳೆಸುವ ಕೆಲಸ ಮಾಡುತ್ತಿದ್ದಾರೆ. ಕನ್ನಡದ ಬಗ್ಗೆ ವಿದೇಶಿಯರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದೇವೆ’ ಎಂದರು. ಏಳು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.