ಬೆಂಗಳೂರು: ಪಾಲಿಕೆ ಬಜೆಟ್ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅನುದಾನ ಮೀಸಲಿಡುವ ನಿಯಮಗಳನ್ನು ಗಾಳಿಗೆ ತೂರಿದ್ದು, ಬಜೆಟ್ ಅನುಷ್ಠಾನಗೊಳಿಸದಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ನ್ಯಾ.ಎಚ್.ಎನ್. ನಾಗಮೋಹನದಾಸ್ ಆಯೋಗ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಶುಕ್ರವಾರ ದೂರು ಸಲ್ಲಿಸಿದರು.