‘ರಾಜ್ಯದಲ್ಲಿ ದಿನೇ ದಿನೇ ದಲಿತರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ರಕ್ಷಿಸಬೇಕಾದ ಕೆಲವು ಪೊಲೀಸರಿಂದಲೇ ದೌರ್ಜನ್ಯ ನಡೆದಿರುವುದು ನಾಚಿಕೆಗೇಡಿನ ಸಂಗತಿ. ಚಿಕ್ಕಮಗಳೂರಿನಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸಿದ್ದು, ಬಸವನ ಬಾಗೇವಾಡಿ ಬಳಿ ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಬಾವಿಗೆ ಎಸೆದಿರುವುದು ಹಲವು ಪ್ರಕರಣಗಳು ನಡೆದಿದ್ದರೂ ಅವುಗಳನ್ನು ಮುಚ್ಚು ಹಾಕುವ ಯತ್ನ ನಡೆಯುತ್ತಿದೆ. ಸರ್ಕಾರ ದಲಿತರ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.