‘ಮಲ್ಲಿಕಾರ್ಜುನ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ, ಅವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು. ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ಕಾಯ್ದೆ ಹಾಗೂ ಸಿಆರ್ಪಿಸಿ ನಿಯಮಗಳನ್ನು ಉಲ್ಲಂಘಿಸಿದ ವಿಧಾನಸೌಧ ಪೊಲೀಸ್ ಠಾಣೆಯ ಎಸಿಪಿ ಮತ್ತು ಡಿಸಿಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಎನ್. ಮೂರ್ತಿ ಆಗ್ರಹಿಸಿದರು.