‘ದಲಿತ ಸಮುದಾಯದ ಅಭಿವೃದ್ಧಿಗಾಗಿ ವಿವಿಧ ಇಲಾಖೆಯಲ್ಲಿ ಮೀಸಲಿಟ್ಟ ಹಣವನ್ನೆಲ್ಲ ಸಮಾಜ ಕಲ್ಯಾಣ ಇಲಾಖೆಗೆ ವರ್ಗಾಯಿಸಬೇಕು. ಏಕ ಗವಾಕ್ಷಿ ವ್ಯವಸ್ಥೆ ಮೂಲಕ ಅಂಥ ಹಣವನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು. ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಸಮರ್ಪಕವಾಗಿ ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ದೂರು ದಾಖಲಿಸುವ ಸಂಬಂಧ ‘ದೂರು ಸಲ್ಲಿಕೆ ಪ್ರಾಧಿಕಾರ’ ರಚಿಸಬೇಕು. ದಲಿತ ಸಂಘಟನೆಗಳ ಕನಿಷ್ಠ ಇಬ್ಬರು ಮುಖಂಡರನ್ನು ಸದಸ್ಯರನ್ನಾಗಿ ಮಾಡಬೇಕು’ ಎಂದೂ ಒತ್ತಾಯಿಸಿದರು.