ಬೆಂಗಳೂರು: ಕರ್ನಾಟಕ ಪರಿಶಿಷ್ಟ ಜಾತಿ, ಪಂಗಡಗಳ ಭೂ ಪರಭಾರೆ ನಿಷೇಧ ಕಾಯ್ದೆ (ಪಿಟಿಸಿಎಲ್) ತಿದ್ದುಪಡಿಗೆ ಆಗ್ರಹಿಸಿ ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ, ಜಂಬೂದ್ವೀಪ ಜನ ಸೇನೆ, ದಸಂಸ, ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದ ಸದಸ್ಯರು ಮಂಗಳವಾರ ಅಂಬೇಡ್ಕರ್ ಪ್ರತಿಮೆ ಮುಂದೆ, ಮುಖ್ಯಮಂತ್ರಿ ಸಮ್ಮುಖದಲ್ಲಿ ಬಾಯಿ ಬಡಿದುಕೊಂಡು ಪ್ರತಿಭಟನೆ ನಡೆಸಿದರು.