ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಅರಣ್ಯ ಪ್ರದೇಶದಲ್ಲಿ ಯಾವುದೇ ಅರಣ್ಯೇತರ ಚಟುವಟಿಕೆ ನಡೆಸುವಂತಿಲ್ಲ. ಒಂದು ವೇಳೆ ನಡೆಸುವುದಾದರೆ ಅದಕ್ಕೆ ಕೇಂದ್ರ ಸರ್ಕಾರದ ಅನುಮತಿ ಕಡ್ಡಾಯ. ಈ ಪ್ರಕರಣದಲ್ಲಿ ಅನುಮತಿ ಪಡೆಯಲಾಗಿದೆಯೇ ಹೇಗೆ ಎಂದು ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತು.‘ಮಾಹಿತಿ ಒದಗಿಸಲು ಸಮಯಾವಕಾಶ ಬೇಕು’ ಎಂದು ಸರ್ಕಾರಿ ವಕೀಲರು ಕೋರಿದ ಕಾರಣ ವಿಚಾರಣೆಯನ್ನು ಇದೇ 9ಕ್ಕೆ ಮುಂದೂಡಲಾಗಿದೆ.