ಇ-ಸಿಗರೇಟ್ ಆರೋಗ್ಯಕ್ಕೆ ಮಾರಕ ಎಂದು ಕೇಂದ್ರ ಸರ್ಕಾರವು ಹಿಂದೆಯೇ ನಿಷೇಧ ಮಾಡಿತ್ತು. ಆದರೂ, ಆರೋಪಿಗಳು ಹೊರ ರಾಜ್ಯದಿಂದ ಇ–ಸಿಗರೇಟ್, ಅದರ ಲಿಕ್ವಿಡ್, ಪಾಡ್ ಹಾಗೂ ಬ್ಯಾಟರಿ ಹಾಗೂ ಇತರೆ ಬಿಡಿಭಾಗಗಳನ್ನು ತಂದು ಮಾರಾಟ ಮಾಡುತ್ತಿರುವುದು ನಗರದಲ್ಲಿ ಕಂಡುಬರುತ್ತಿದೆ. ಕಳೆದ ತಿಂಗಳು ನಗರದ ಕುಂಬಾರಪೇಟೆ ನಂಬೂದರಿ ಮ್ಯಾನ್ಷನ್ 2ನೇ ಮಹಡಿ ವರ್ಧಮಾನ್ ಮಾರ್ಕೆಟಿಂಗ್ ಎಂಬ ಗೋದಾಮಿನ ಮೇಲೆ ದಾಳಿ ನಡೆಸಿ, ₹ 1.25 ಕೋಟಿ ಮೌಲ್ಯದ ವಸ್ತು ಜಪ್ತಿ ಮಾಡಿಕೊಳ್ಳಲಾಗಿತ್ತು.