<p><strong>ಬೆಂಗಳೂರು:</strong> ಇ-ಖಾತಾ ತಿದ್ದುಪಡಿಯನ್ನು ಸರಳಗೊಳಿಸಬೇಕು ಎಂದು ಎಫ್ಕೆಸಿಸಿಐ ಪದಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದರು.</p>.<p>ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಶನಿವಾರ ಆಯೋಜಿಸಿದ್ದ ರಾಜ್ಯಮಟ್ಟದ ಜಿಲ್ಲಾ ವಾಣಿಜ್ಯ, ಕೈಗಾರಿಕಾ ಸಂಸ್ಥೆಗಳ ಸಮ್ಮೇಳನದಲ್ಲಿ ಈ ಆಗ್ರಹ ಮಂಡಿಸಲಾಯಿತು.</p>.<p>ಎಫ್ಕೆಸಿಸಿಐ ಅಧ್ಯಕ್ಷ ಎಂ.ಜಿ. ಬಾಲಕೃಷ್ಣ ಮಾತನಾಡಿ, ‘ಇ-ಖಾತಾದಲ್ಲಿ ಸಣ್ಣ ಅಕ್ಷರ ತೊಂದರೆಯಾದರೂ ಅದನ್ನು ಸರಿಪಡಿಸಲು ಐದಾರು ತಿಂಗಳು ಬೇಕಾಗುತ್ತದೆ. ಮೇಲಧಿಕಾರಿಗಳ ಒಪ್ಪಿಗೆ ಬೇಕಾಗುತ್ತದೆ. ಸರಳೀಕರಿಸುವ ಮೂಲಕ ತಿದ್ದುಪಡಿ ಬೇಗ ಆಗುವಂತೆ ಮಾಡಬೇಕು’ ಎಂದು ಮನವಿ ಮಾಡಿದರು.</p>.<p>ಕಾವೇರಿ ಪೋರ್ಟಲ್ ಕಾರ್ಯ ನಿರ್ವಹಿಸುತ್ತಿಲ್ಲ. ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ಪಂಚಾಯಿತಿ ಮಟ್ಟದಲ್ಲಿ ತೆರಿಗೆಯಲ್ಲೂ ಕಾನೂನು ಉಲ್ಲಂಘನೆ ಆಗುತ್ತಿದೆ. ಪಿಡಿಒಗಳು ನೀತಿ ನಿಯಮ ಪಾಲನೆ ಮಾಡಲು ಸೂಚಿಸಬೇಕು ಎಂದು ಹೇಳಿದರು.</p>.<p>ಪರಿಸರ ಇಲಾಖೆಯ ಹಿರಿಯ ವಿಭಾಗೀಯ ಅಧಿಕಾರಿ ಸೈಯದ್ ಖಾಜಾ ಮೊಹಿದ್ದೀನ್, ಸಂಸ್ಥೆಯ ಚುನಾಯಿತ ಅಧ್ಯಕ್ಷೆ ಉಮಾರೆಡ್ಡಿ, ಹಿರಿಯ ಉಪಾಧ್ಯಕ್ಷ ಟಿ. ಸಾಯಿರಾಂ ಪ್ರಸಾದ್, ನಿಕಟಪೂರ್ವ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ, ಅಂಡಾರು ದೇವಿ ಪ್ರಸಾದ್ ಶೆಟ್ಟಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇ-ಖಾತಾ ತಿದ್ದುಪಡಿಯನ್ನು ಸರಳಗೊಳಿಸಬೇಕು ಎಂದು ಎಫ್ಕೆಸಿಸಿಐ ಪದಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದರು.</p>.<p>ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಶನಿವಾರ ಆಯೋಜಿಸಿದ್ದ ರಾಜ್ಯಮಟ್ಟದ ಜಿಲ್ಲಾ ವಾಣಿಜ್ಯ, ಕೈಗಾರಿಕಾ ಸಂಸ್ಥೆಗಳ ಸಮ್ಮೇಳನದಲ್ಲಿ ಈ ಆಗ್ರಹ ಮಂಡಿಸಲಾಯಿತು.</p>.<p>ಎಫ್ಕೆಸಿಸಿಐ ಅಧ್ಯಕ್ಷ ಎಂ.ಜಿ. ಬಾಲಕೃಷ್ಣ ಮಾತನಾಡಿ, ‘ಇ-ಖಾತಾದಲ್ಲಿ ಸಣ್ಣ ಅಕ್ಷರ ತೊಂದರೆಯಾದರೂ ಅದನ್ನು ಸರಿಪಡಿಸಲು ಐದಾರು ತಿಂಗಳು ಬೇಕಾಗುತ್ತದೆ. ಮೇಲಧಿಕಾರಿಗಳ ಒಪ್ಪಿಗೆ ಬೇಕಾಗುತ್ತದೆ. ಸರಳೀಕರಿಸುವ ಮೂಲಕ ತಿದ್ದುಪಡಿ ಬೇಗ ಆಗುವಂತೆ ಮಾಡಬೇಕು’ ಎಂದು ಮನವಿ ಮಾಡಿದರು.</p>.<p>ಕಾವೇರಿ ಪೋರ್ಟಲ್ ಕಾರ್ಯ ನಿರ್ವಹಿಸುತ್ತಿಲ್ಲ. ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ಪಂಚಾಯಿತಿ ಮಟ್ಟದಲ್ಲಿ ತೆರಿಗೆಯಲ್ಲೂ ಕಾನೂನು ಉಲ್ಲಂಘನೆ ಆಗುತ್ತಿದೆ. ಪಿಡಿಒಗಳು ನೀತಿ ನಿಯಮ ಪಾಲನೆ ಮಾಡಲು ಸೂಚಿಸಬೇಕು ಎಂದು ಹೇಳಿದರು.</p>.<p>ಪರಿಸರ ಇಲಾಖೆಯ ಹಿರಿಯ ವಿಭಾಗೀಯ ಅಧಿಕಾರಿ ಸೈಯದ್ ಖಾಜಾ ಮೊಹಿದ್ದೀನ್, ಸಂಸ್ಥೆಯ ಚುನಾಯಿತ ಅಧ್ಯಕ್ಷೆ ಉಮಾರೆಡ್ಡಿ, ಹಿರಿಯ ಉಪಾಧ್ಯಕ್ಷ ಟಿ. ಸಾಯಿರಾಂ ಪ್ರಸಾದ್, ನಿಕಟಪೂರ್ವ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ, ಅಂಡಾರು ದೇವಿ ಪ್ರಸಾದ್ ಶೆಟ್ಟಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>