<p><strong>ಬೆಂಗಳೂರು</strong>: ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ 50 ಸಾವಿರ ಇ–ಖಾತಾ ವಿತರಿಸುವ ಗುರಿ ಹೊಂದಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ್ ಹೇಳಿದರು.</p><p>ಹೆಬ್ಬಾಳದ ಎಚ್ಎಂಟಿ ಮೈದಾನದಲ್ಲಿ ಆಯೋಜಿಸಿರುವ ಎರಡು ದಿನಗಳ ಇ–ಖಾತಾ ಮೇಳಕ್ಕೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.</p><p>‘ಪ್ರತಿಯೊಬ್ಬ ಆಸ್ತಿ ಮಾಲೀಕರಿಗೆ ನಿವೇಶನಗಳ ಮಾಲೀಕತ್ವಕ್ಕೆ ಅಧಿಕೃತ ದಾಖಲೆಯಾಗಿ ಇ-ಖಾತಾ ನೀಡಲಾಗುತ್ತಿದೆ. ಇದು ಸರ್ಕಾರದ ಪ್ರಮುಖ ಮತ್ತು ಕನಸಿನ ಯೋಜನೆಯಾಗಿದ್ದು, ಆಸ್ತಿ ಮಾಲೀಕರು ಈ ದಾಖಲೆಯನ್ನು ಪಡೆದುಕೊಳ್ಳಬೇಕು’ ಎಂದರು.</p><p>‘ನಾಗರಿಕರ ಮನೆ ಬಾಗಿಲಿಗೆ ಇ-ಖಾತಾ ನೀಡಬೇಕೆಂಬ ಉದ್ದೇಶದಿಂದ ಇ-ಖಾತಾ ಮೇಳಗಳನ್ನು ಆಯೋಜಿಸಲಾಗುತ್ತಿದೆ. ರಾಜ್ಯದಾದ್ಯಂತ 55 ಲಕ್ಷಕ್ಕೂ ಅಧಿಕ ಆಸ್ತಿಗಳಿಗೆ ಇ-ಖಾತೆಗಳನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ. ಹೆಬ್ಬಾಳ ಕ್ಷೇತ್ರದಲ್ಲಿರುವ 50 ಸಾವಿರಕ್ಕೂ ಹೆಚ್ಚು ಸ್ವತ್ತುಗಳಲ್ಲಿ 13 ಸಾವಿರ ಆಸ್ತಿಗಳಿಗೆ ಇ–ಖಾತಾ ವಿತರಿಸಲಾಗಿದೆ. ಈ ಮೇಳದಲ್ಲಿ ನಾಲ್ಕು ಸಾವಿರ ಇ–ಖಾತಾ ವಿತರಿಸುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.</p><p>ಹೆಬ್ಬಾಳ ಕ್ಷೇತ್ರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ₹200 ಕೋಟಿ ಅನುದಾನಕ್ಕೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಕೃಷಿ ವಿಶ್ವ ವಿದ್ಯಾಲಯದ ಬಳಿ ಆಸ್ಪತ್ರೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.</p><p>ಇ–ಖಾತಾ ಮೇಳದಲ್ಲಿ ಮಂಗಳವಾರ 485 ಮಂದಿಗೆ ಟೋಕನ್ಗಳನ್ನು ನೀಡಲಾಗಿದ್ದು, 300 ಅರ್ಜಿಗಳನ್ನು ಅನುಮೋದಿಸಿ ಸ್ಥಳದಲ್ಲಿಯೇ ಅಂತಿಮ ಇ–ಖಾತಾ ನೀಡಲಾಯಿತು. ಉಳಿದವರ ದಾಖಲೆ ಪರಿಶೀಲನೆ, ಅನುಮೋದನೆ ಪ್ರಕ್ರಿಯೆ ಮುಂದುವರಿದಿದೆ ಎಂದು ಬಿಬಿಎಂಪಿ ಪಶ್ಚಿಮ ವಲಯ ಆಯುಕ್ತೆ ಆರ್. ಸ್ನೇಹಲ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ 50 ಸಾವಿರ ಇ–ಖಾತಾ ವಿತರಿಸುವ ಗುರಿ ಹೊಂದಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ್ ಹೇಳಿದರು.</p><p>ಹೆಬ್ಬಾಳದ ಎಚ್ಎಂಟಿ ಮೈದಾನದಲ್ಲಿ ಆಯೋಜಿಸಿರುವ ಎರಡು ದಿನಗಳ ಇ–ಖಾತಾ ಮೇಳಕ್ಕೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.</p><p>‘ಪ್ರತಿಯೊಬ್ಬ ಆಸ್ತಿ ಮಾಲೀಕರಿಗೆ ನಿವೇಶನಗಳ ಮಾಲೀಕತ್ವಕ್ಕೆ ಅಧಿಕೃತ ದಾಖಲೆಯಾಗಿ ಇ-ಖಾತಾ ನೀಡಲಾಗುತ್ತಿದೆ. ಇದು ಸರ್ಕಾರದ ಪ್ರಮುಖ ಮತ್ತು ಕನಸಿನ ಯೋಜನೆಯಾಗಿದ್ದು, ಆಸ್ತಿ ಮಾಲೀಕರು ಈ ದಾಖಲೆಯನ್ನು ಪಡೆದುಕೊಳ್ಳಬೇಕು’ ಎಂದರು.</p><p>‘ನಾಗರಿಕರ ಮನೆ ಬಾಗಿಲಿಗೆ ಇ-ಖಾತಾ ನೀಡಬೇಕೆಂಬ ಉದ್ದೇಶದಿಂದ ಇ-ಖಾತಾ ಮೇಳಗಳನ್ನು ಆಯೋಜಿಸಲಾಗುತ್ತಿದೆ. ರಾಜ್ಯದಾದ್ಯಂತ 55 ಲಕ್ಷಕ್ಕೂ ಅಧಿಕ ಆಸ್ತಿಗಳಿಗೆ ಇ-ಖಾತೆಗಳನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ. ಹೆಬ್ಬಾಳ ಕ್ಷೇತ್ರದಲ್ಲಿರುವ 50 ಸಾವಿರಕ್ಕೂ ಹೆಚ್ಚು ಸ್ವತ್ತುಗಳಲ್ಲಿ 13 ಸಾವಿರ ಆಸ್ತಿಗಳಿಗೆ ಇ–ಖಾತಾ ವಿತರಿಸಲಾಗಿದೆ. ಈ ಮೇಳದಲ್ಲಿ ನಾಲ್ಕು ಸಾವಿರ ಇ–ಖಾತಾ ವಿತರಿಸುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.</p><p>ಹೆಬ್ಬಾಳ ಕ್ಷೇತ್ರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ₹200 ಕೋಟಿ ಅನುದಾನಕ್ಕೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಕೃಷಿ ವಿಶ್ವ ವಿದ್ಯಾಲಯದ ಬಳಿ ಆಸ್ಪತ್ರೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.</p><p>ಇ–ಖಾತಾ ಮೇಳದಲ್ಲಿ ಮಂಗಳವಾರ 485 ಮಂದಿಗೆ ಟೋಕನ್ಗಳನ್ನು ನೀಡಲಾಗಿದ್ದು, 300 ಅರ್ಜಿಗಳನ್ನು ಅನುಮೋದಿಸಿ ಸ್ಥಳದಲ್ಲಿಯೇ ಅಂತಿಮ ಇ–ಖಾತಾ ನೀಡಲಾಯಿತು. ಉಳಿದವರ ದಾಖಲೆ ಪರಿಶೀಲನೆ, ಅನುಮೋದನೆ ಪ್ರಕ್ರಿಯೆ ಮುಂದುವರಿದಿದೆ ಎಂದು ಬಿಬಿಎಂಪಿ ಪಶ್ಚಿಮ ವಲಯ ಆಯುಕ್ತೆ ಆರ್. ಸ್ನೇಹಲ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>