<p><strong>ಬೆಂಗಳೂರು:</strong> ‘ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ಸುಗಮಗೊಳಿಸಲು ‘ಇ-ಸಹಮತಿ’ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದ್ದು, ಇದರಿಂದ ನಕಲಿ ಅಂಕಪಟ್ಟಿ ಮತ್ತು ಪ್ರಮಾಣಪತ್ರಗಳ ದಂಧೆಗೆ ಕಡಿವಾಣ ಬೀಳಲಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.</p>.<p>ವಿಧಾನಸೌಧದಲ್ಲಿ ಹೊಸ ತಂತ್ರಾಂಶಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಈ ವ್ಯವಸ್ಥೆಯಿಂದ ವಿಶ್ವವಿದ್ಯಾಲಯಗಳು ಪರೀಕ್ಷೆ ಮತ್ತು ಅಂಕಪಟ್ಟಿಗಳಿಗಾಗಿ ಖರ್ಚು ಮಾಡುತ್ತಿದ್ದ ಸುಮಾರು ₹ 60 ಕೋಟಿ ಉಳಿತಾಯ ಆಗಲಿದೆ. ಮಾನ್ಯತೆ ಹೊಂದಿರುವ 3,400ಕ್ಕೂ ಹೆಚ್ಚು ಕಾಲೇಜುಗಳ 16 ಲಕ್ಷ ವಿದ್ಯಾರ್ಥಿಗಳಿಗೆ ಲಾಭ ಆಗಲಿದೆ’ ಎಂದರು.</p>.<p>‘ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ ತಂತ್ರಾಂಶ ಯೋಜನೆಯಡಿ ಇವುಗಳನ್ನು ಅಭಿವೃದ್ಧಿಪಡಿಸಲಾಗಿದೆ. 10 ಮಾಡ್ಯೂಲ್ಗಳನ್ನು ಒಳಗೊಂಡಿರುವ ಈ ಯೋಜನೆಯಡಿ 2021ರ ಆಗಸ್ಟ್ ಮತ್ತು ಡಿಸೆಂಬರ್ ತಿಂಗಳಲ್ಲಿ ಪ್ರವೇಶಾತಿ, ಶೈಕ್ಷಣಿಕ ಹಾಗೂ ತರಗತಿ ನಿರ್ವಹಣೆ ತಂತ್ರಾಂಶಗಳನ್ನು ಅಳವಡಿಸಲಾಗಿದೆ. ಉಳಿದವುಗಳನ್ನು ಜೂನ್ ವೇಳೆಗೆ ಅಳವಡಿಸಲಾಗುವುದು. ಇದರ ಅನುಷ್ಠಾನಕ್ಕೆ ಸಹಾಯವಾಣಿ ವ್ಯವಸ್ಥೆಯೂ ಇರಲಿದೆ. ಇಂಥ ವ್ಯವಸ್ಥೆ ಬೇರೆ ಯಾವ ರಾಜ್ಯದಲ್ಲೂ ಇಲ್ಲ’ ಎಂದರು.</p>.<p>‘ವಿದ್ಯಾರ್ಥಿಗಳು ಪದವಿ ಶಿಕ್ಷಣವನ್ನು ಅರ್ಧದಲ್ಲಿಯೇ ಮೊಟಕುಗೊಳಿಸಿದರೆ ಅಥವಾ ಮರುಪ್ರವೇಶ ಬಯಸಿದರೆ ಅದಕ್ಕೂ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಅಗತ್ಯವೆನಿಸಿದಾಗ ಪ್ರಮಾಣಪತ್ರಗಳನ್ನು ಪಡೆಯಬಹುದು. ಅಲ್ಲದೆ, ಪರೀಕ್ಷೆಗೆ ಸಂಬಂಧಿಸಿದ ದತ್ತಾಂಶಗಳನ್ನು ರಾಷ್ಟ್ರೀಯ ಶೈಕ್ಷಣಿಕ ಸಾಧನಾ ಭಂಡಾರಕ್ಕೆ (ನ್ಯಾಷನಲ್ ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್- ಎನ್ಎಬಿಸಿ) ಸೇರಿಸಲು ಹಾಗೂ ಉದ್ಯೋಗದಾತರ ಜತೆಗೆ ಅಂಕಪಟ್ಟಿ ಹಂಚಿಕೊಳ್ಳಲು ಅವಕಾಶವಿದೆ. ಇವೆಲ್ಲವೂ ಎನ್ಕ್ರಿಪ್ಟೆಡ್ ರೂಪದಲ್ಲಿ ಇರಲಿದ್ದು, ಪ್ರತೀ ಸೆಮಿಸ್ಟರಿನ ಅಂಕಪಟ್ಟಿಗಳನ್ನು ನೇರವಾಗಿ ‘ಡಿಜಿಲಾಕರ್-ಎನ್ಎಡಿ’ಗೆ ವರ್ಗಾಯಿಸಬಹುದು. ಈ ಪ್ರಕ್ರಿಯೆಯಲ್ಲಿ ಭದ್ರತೆ ಮತ್ತು ಗೌಪ್ಯತೆ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ’ ಎಂದು ವಿವರಿಸಿದರು.</p>.<p>ಇ-ಆಡಳಿತ ಕೇಂದ್ರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ತಿಮ್ಮೇಗೌಡ ಮತ್ತು ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು, ಕುಲಸಚಿವರು ಇದ್ದರು. ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ. ಪ್ರದೀಪ್ ವರ್ಚುವಲ್ ಮೂಲಕ ಹಾಜರಾದರು.</p>.<p><strong>ಪರೀಕ್ಷಾ ಶುಲ್ಕದ ಹೊರೆ ಇಳಿಕೆ</strong></p>.<p>‘ಸರ್ಕಾರಿ ಸ್ವಾಮ್ಯದ 24 ವಿಶ್ವವಿದ್ಯಾಲಯಗಳ ಪೈಕಿ ಎರಡು ವಿಶ್ವವಿದ್ಯಾಲಯಗಳು ಪರೀಕ್ಷಾ ನಿರ್ವಹಣೆಯ ತಂತ್ರಾಂಶಗಳನ್ನು ಹೊಂದಿದ್ದರೆ, ಎಂಟು ವಿಶ್ವವಿದ್ಯಾಲಯಗಳಲ್ಲಿ ಈ ತಂತ್ರಾಂಶಗಳಿಲ್ಲ. ಇವುಗಳು ಹೊರಗುತ್ತಿಗೆಯನ್ನು ನೆಚ್ಚಿಕೊಂಡಿವೆ. ‘ಇ-ಸಹಮತಿ’ ಮೂಲಕ ಡಿಜಿಟಲ್ ಮೌಲ್ಯಮಾಪನ, ಆನ್ಲೈನ್ ಮೂಲಕ ಪ್ರಶ್ನೆಪತ್ರಿಕೆ, ಪ್ರವೇಶಪತ್ರ, ವೇಳಾಪಟ್ಟಿ, ಪರೀಕ್ಷಾ ಶುಲ್ಕ ಪಾವತಿ, ಪ್ರಯೋಗಾಲಯಗಳ ತಂಡಗಳ ನಿರ್ವಹಣೆ, ಅಂಕಪಟ್ಟಿ ಪೂರೈಕೆ ಸಾಧ್ಯವಾಗಲಿದೆ. ಅಲ್ಲದೆ, ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕದ ಹೊರೆ ಕಡಿಮೆ ಆಗಲಿದೆ’ ಎಂದು ಅಶ್ವತ್ಥನಾರಾಯಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ಸುಗಮಗೊಳಿಸಲು ‘ಇ-ಸಹಮತಿ’ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದ್ದು, ಇದರಿಂದ ನಕಲಿ ಅಂಕಪಟ್ಟಿ ಮತ್ತು ಪ್ರಮಾಣಪತ್ರಗಳ ದಂಧೆಗೆ ಕಡಿವಾಣ ಬೀಳಲಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.</p>.<p>ವಿಧಾನಸೌಧದಲ್ಲಿ ಹೊಸ ತಂತ್ರಾಂಶಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಈ ವ್ಯವಸ್ಥೆಯಿಂದ ವಿಶ್ವವಿದ್ಯಾಲಯಗಳು ಪರೀಕ್ಷೆ ಮತ್ತು ಅಂಕಪಟ್ಟಿಗಳಿಗಾಗಿ ಖರ್ಚು ಮಾಡುತ್ತಿದ್ದ ಸುಮಾರು ₹ 60 ಕೋಟಿ ಉಳಿತಾಯ ಆಗಲಿದೆ. ಮಾನ್ಯತೆ ಹೊಂದಿರುವ 3,400ಕ್ಕೂ ಹೆಚ್ಚು ಕಾಲೇಜುಗಳ 16 ಲಕ್ಷ ವಿದ್ಯಾರ್ಥಿಗಳಿಗೆ ಲಾಭ ಆಗಲಿದೆ’ ಎಂದರು.</p>.<p>‘ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ ತಂತ್ರಾಂಶ ಯೋಜನೆಯಡಿ ಇವುಗಳನ್ನು ಅಭಿವೃದ್ಧಿಪಡಿಸಲಾಗಿದೆ. 10 ಮಾಡ್ಯೂಲ್ಗಳನ್ನು ಒಳಗೊಂಡಿರುವ ಈ ಯೋಜನೆಯಡಿ 2021ರ ಆಗಸ್ಟ್ ಮತ್ತು ಡಿಸೆಂಬರ್ ತಿಂಗಳಲ್ಲಿ ಪ್ರವೇಶಾತಿ, ಶೈಕ್ಷಣಿಕ ಹಾಗೂ ತರಗತಿ ನಿರ್ವಹಣೆ ತಂತ್ರಾಂಶಗಳನ್ನು ಅಳವಡಿಸಲಾಗಿದೆ. ಉಳಿದವುಗಳನ್ನು ಜೂನ್ ವೇಳೆಗೆ ಅಳವಡಿಸಲಾಗುವುದು. ಇದರ ಅನುಷ್ಠಾನಕ್ಕೆ ಸಹಾಯವಾಣಿ ವ್ಯವಸ್ಥೆಯೂ ಇರಲಿದೆ. ಇಂಥ ವ್ಯವಸ್ಥೆ ಬೇರೆ ಯಾವ ರಾಜ್ಯದಲ್ಲೂ ಇಲ್ಲ’ ಎಂದರು.</p>.<p>‘ವಿದ್ಯಾರ್ಥಿಗಳು ಪದವಿ ಶಿಕ್ಷಣವನ್ನು ಅರ್ಧದಲ್ಲಿಯೇ ಮೊಟಕುಗೊಳಿಸಿದರೆ ಅಥವಾ ಮರುಪ್ರವೇಶ ಬಯಸಿದರೆ ಅದಕ್ಕೂ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಅಗತ್ಯವೆನಿಸಿದಾಗ ಪ್ರಮಾಣಪತ್ರಗಳನ್ನು ಪಡೆಯಬಹುದು. ಅಲ್ಲದೆ, ಪರೀಕ್ಷೆಗೆ ಸಂಬಂಧಿಸಿದ ದತ್ತಾಂಶಗಳನ್ನು ರಾಷ್ಟ್ರೀಯ ಶೈಕ್ಷಣಿಕ ಸಾಧನಾ ಭಂಡಾರಕ್ಕೆ (ನ್ಯಾಷನಲ್ ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್- ಎನ್ಎಬಿಸಿ) ಸೇರಿಸಲು ಹಾಗೂ ಉದ್ಯೋಗದಾತರ ಜತೆಗೆ ಅಂಕಪಟ್ಟಿ ಹಂಚಿಕೊಳ್ಳಲು ಅವಕಾಶವಿದೆ. ಇವೆಲ್ಲವೂ ಎನ್ಕ್ರಿಪ್ಟೆಡ್ ರೂಪದಲ್ಲಿ ಇರಲಿದ್ದು, ಪ್ರತೀ ಸೆಮಿಸ್ಟರಿನ ಅಂಕಪಟ್ಟಿಗಳನ್ನು ನೇರವಾಗಿ ‘ಡಿಜಿಲಾಕರ್-ಎನ್ಎಡಿ’ಗೆ ವರ್ಗಾಯಿಸಬಹುದು. ಈ ಪ್ರಕ್ರಿಯೆಯಲ್ಲಿ ಭದ್ರತೆ ಮತ್ತು ಗೌಪ್ಯತೆ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ’ ಎಂದು ವಿವರಿಸಿದರು.</p>.<p>ಇ-ಆಡಳಿತ ಕೇಂದ್ರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ತಿಮ್ಮೇಗೌಡ ಮತ್ತು ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು, ಕುಲಸಚಿವರು ಇದ್ದರು. ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ. ಪ್ರದೀಪ್ ವರ್ಚುವಲ್ ಮೂಲಕ ಹಾಜರಾದರು.</p>.<p><strong>ಪರೀಕ್ಷಾ ಶುಲ್ಕದ ಹೊರೆ ಇಳಿಕೆ</strong></p>.<p>‘ಸರ್ಕಾರಿ ಸ್ವಾಮ್ಯದ 24 ವಿಶ್ವವಿದ್ಯಾಲಯಗಳ ಪೈಕಿ ಎರಡು ವಿಶ್ವವಿದ್ಯಾಲಯಗಳು ಪರೀಕ್ಷಾ ನಿರ್ವಹಣೆಯ ತಂತ್ರಾಂಶಗಳನ್ನು ಹೊಂದಿದ್ದರೆ, ಎಂಟು ವಿಶ್ವವಿದ್ಯಾಲಯಗಳಲ್ಲಿ ಈ ತಂತ್ರಾಂಶಗಳಿಲ್ಲ. ಇವುಗಳು ಹೊರಗುತ್ತಿಗೆಯನ್ನು ನೆಚ್ಚಿಕೊಂಡಿವೆ. ‘ಇ-ಸಹಮತಿ’ ಮೂಲಕ ಡಿಜಿಟಲ್ ಮೌಲ್ಯಮಾಪನ, ಆನ್ಲೈನ್ ಮೂಲಕ ಪ್ರಶ್ನೆಪತ್ರಿಕೆ, ಪ್ರವೇಶಪತ್ರ, ವೇಳಾಪಟ್ಟಿ, ಪರೀಕ್ಷಾ ಶುಲ್ಕ ಪಾವತಿ, ಪ್ರಯೋಗಾಲಯಗಳ ತಂಡಗಳ ನಿರ್ವಹಣೆ, ಅಂಕಪಟ್ಟಿ ಪೂರೈಕೆ ಸಾಧ್ಯವಾಗಲಿದೆ. ಅಲ್ಲದೆ, ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕದ ಹೊರೆ ಕಡಿಮೆ ಆಗಲಿದೆ’ ಎಂದು ಅಶ್ವತ್ಥನಾರಾಯಣ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>