‘ಪ್ರಸ್ತುತ ಸಂದರ್ಭ ನೋಡಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯುವ ಸಾಧ್ಯತೆ ಕಡಿಮೆ ಇದೆ. ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೇರಲು ವಿಫಲವಾದರೆ, ಅತಂತ್ರ ಸಂಸತ್ ನಿರ್ಮಾಣವಾದರೆ ಸಮ್ಮಿಶ್ರ ಸರ್ಕಾರ ನಡೆಸಲು ಮೋದಿಯವರಿಗೆ ಸಾಧ್ಯವಾಗುವುದಿಲ್ಲ. ಆಗ ಪ್ರಧಾನಿ ಅಭ್ಯರ್ಥಿಯಾಗಿ ಪ್ರಣವ್ ಅವರನ್ನು ಮುನ್ನೆಲೆಗೆ ತರಲು ಆರ್ಎಸ್ಎಸ್ ಈಗಿನಿಂದಲೇ ತಂತ್ರ ಹೆಣೆಯುತ್ತಿದೆ’ ಎಂದು ಸಾಮ್ನಾದ ಸಂಪಾದಕೀಯದಲ್ಲಿ ಬರೆಯಲಾಗಿತ್ತು.