‘ಅಸಂಘಟಿತ ತ್ಯಾಜ್ಯ ವಿಲೇವಾರಿ ಘಟಕಗಳು ಪರಿಸರಕ್ಕೆ ಮಾರಕವಾಗುವ ರೀತಿಯಲ್ಲಿ ತ್ಯಾಜ್ಯವನ್ನು ಬೇರ್ಪಡಿಸುತ್ತಿವೆ. ಇದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಿ, ನೈಸರ್ಗಿಕ ಸಂಪನ್ಮೂಲವನ್ನು ಹಾಳು ಮಾಡುತ್ತಿವೆ. ಇದನ್ನು ಮನಗಂಡು ಇ-ಪರಿಸರ ಕಾರ್ಖಾನೆಯು ನಗರ ಗಣಿಗಾರಿಕಾ ಸಂಶೋಧನಾ ಕೇಂದ್ರವನ್ನು ಆರಂಭಿಸಿ ಹೊಸ ಹೆಜ್ಜೆಯಿಟ್ಟಿರುವುದು ಶ್ಲಾಘನೀಯ. ದೇಶದಲ್ಲಿಯೇ ಇಂತಹ ಸಾಧನೆ ಮಾಡಿದ ಪ್ರಥಮ ಕಾರ್ಖಾನೆಯಾಗಿದೆ ಎಂದು ಸಾರಸ್ವತ್ ಪ್ರಶಂಸಿಸಿದರು.