ರೋಟರಿ ಬೆಂಗಳೂರು ಪಶ್ಚಿಮ ವಲಯದ ಅಧ್ಯಕ್ಷ ಡಾ. ನಟೇಶ್ ಬಾಬು, ‘ಕೋವಿಡ್ನಿಂದಾಗಿ ಮಕ್ಕಳ ಶಿಕ್ಷಣಕ್ಕೆ ತೊಡಕಾಗಿದೆ. ಹಾಗಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪಠ್ಯ ಒಳಗೊಂಡ ಟ್ಯಾಬ್ ವಿತರಿಸಲಾಗುತ್ತಿದೆ. ಫಲಿತಾಂಶ ಕಡಿಮೆ ಇರುವ ಹಾಗೂ ದಾನಿಗಳು ಇಚ್ಛಿಸಿದ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ಕೆ ರಾಜ್ಯದ ವಿವಿಧೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ’ ಎಂದರು.