<p><strong>ಬೆಂಗಳೂರು</strong>: ‘ಮಕ್ಕಳಲ್ಲಿ ಶ್ರವಣದೋಷ ಸಮಸ್ಯೆ ಹೆಚ್ಚುತ್ತಿದೆ. ಈ ಸಮಸ್ಯೆಯನ್ನು ಶೀಘ್ರವಾಗಿ ಪತ್ತೆ ಮಾಡಿದಲ್ಲಿ ಸುಲಭವಾಗಿ ಪರಿಹಾರ ಒದಗಿಸಬಹುದು’ ಎಂದು ಮೆಡಿಕೇರಿ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್ನ ಡಾ. ಶಂಕರ್ ಮೆಡಿಕೇರಿ ತಿಳಿಸಿದರು.</p>.<p>ವಿಶ್ವ ಅಂಗವಿಕಲರ ದಿನದ ಪ್ರಯುಕ್ತ ರೋಟರಿ ಬೆಂಗೂರು ಪಶ್ಚಿಮ ವಲಯವು ನಗರದಲ್ಲಿ ಗುರುವಾರ ಹಮ್ಮಿಕೊಂಡ ‘ಜ್ಞಾನ ದೀವಿಗೆ’ ಕಾರ್ಯಕ್ರಮದಲ್ಲಿ 10ನೇ ತರಗತಿಯ ಅಂಗವಿಕಲ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿ ಮಾತನಾಡಿದರು.</p>.<p>‘ಅಂಗವಿಕಲರ ಅಗತ್ಯ ಮತ್ತು ಸಮಸ್ಯೆ ಅರಿತು, ಸಹಾಯ ಮಾಡಬೇಕಿದೆ. ಕೆಲವರಿಗೆ ಹುಟ್ಟುವಾಗಲೇ ಶ್ರವಣದೋಷದಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಮಗು ಹುಟ್ಟಿದ ಕೆಲ ದಿನಗಳಲ್ಲೇ ಶ್ರವಣ ದೋಷ ಪರೀಕ್ಷೆ ನಡೆಸಬೇಕು. ಶ್ರವಣದೋಷದ ತೀವ್ರತೆ ಹೆಚ್ಚಿದಂತೆ ಅದರ ಚಿಕಿತ್ಸೆಯೂ ಸವಾಲಾಗುತ್ತಾ ಹೋಗುತ್ತದೆ. ಈ ಸಮಸ್ಯೆಯ ಪ್ರಮಾಣವನ್ನು ಅಳೆಯಲು ನಿರ್ದಿಷ್ಟ ಪರೀಕ್ಷೆಗಳಿವೆ’ ಎಂದರು.</p>.<p>‘ಶ್ರವಣ ದೋಷವನ್ನು ಬೇಗ ಗುರುತಿಸಿದಲ್ಲಿ ಔಷಧಗಳಿಂದಲೇ ಕೆಲವರಿಗೆ ವಾಸಿಮಾಡಬಹುದು. ಕೆಲವರಿಗೆ ಶ್ರವಣ ಸಾಧನಗಳ ಅಗತ್ಯ ಇರುತ್ತದೆ. ಇನ್ನೂ ಕೆಲವರಿಗೆ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಅನಿವಾರ್ಯವಾಗುತ್ತದೆ. ಈ ಮಾದರಿಯ ಶಸ್ತ್ರಚಿಕಿತ್ಸೆ ದುಬಾರಿ. ಇದರಿಂದಾಗಿ ಬಡ–ಮಧ್ಯಮ ವರ್ಗದವರಿಗೆ ಈ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದು ಕಷ್ಟ. ಕೇಂದ್ರ ಹಾಗೂ ರಾಜ್ಯ ಸರ್ಕಾರವು ವಿವಿಧ ಯೋಜನೆಗಳಡಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಈ ಶಸ್ತ್ರಚಿಕಿತ್ಸೆಗೆ ನೆರವು ನೀಡುತ್ತಿವೆ’ ಎಂದರು.</p>.<p>ರೋಟರಿ ಬೆಂಗಳೂರು ಪಶ್ಚಿಮ ವಲಯದ ಅಧ್ಯಕ್ಷ ಡಾ. ನಟೇಶ್ ಬಾಬು, ‘ಕೋವಿಡ್ನಿಂದಾಗಿ ಮಕ್ಕಳ ಶಿಕ್ಷಣಕ್ಕೆ ತೊಡಕಾಗಿದೆ. ಹಾಗಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪಠ್ಯ ಒಳಗೊಂಡ ಟ್ಯಾಬ್ ವಿತರಿಸಲಾಗುತ್ತಿದೆ. ಫಲಿತಾಂಶ ಕಡಿಮೆ ಇರುವ ಹಾಗೂ ದಾನಿಗಳು ಇಚ್ಛಿಸಿದ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ಕೆ ರಾಜ್ಯದ ವಿವಿಧೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮಕ್ಕಳಲ್ಲಿ ಶ್ರವಣದೋಷ ಸಮಸ್ಯೆ ಹೆಚ್ಚುತ್ತಿದೆ. ಈ ಸಮಸ್ಯೆಯನ್ನು ಶೀಘ್ರವಾಗಿ ಪತ್ತೆ ಮಾಡಿದಲ್ಲಿ ಸುಲಭವಾಗಿ ಪರಿಹಾರ ಒದಗಿಸಬಹುದು’ ಎಂದು ಮೆಡಿಕೇರಿ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್ನ ಡಾ. ಶಂಕರ್ ಮೆಡಿಕೇರಿ ತಿಳಿಸಿದರು.</p>.<p>ವಿಶ್ವ ಅಂಗವಿಕಲರ ದಿನದ ಪ್ರಯುಕ್ತ ರೋಟರಿ ಬೆಂಗೂರು ಪಶ್ಚಿಮ ವಲಯವು ನಗರದಲ್ಲಿ ಗುರುವಾರ ಹಮ್ಮಿಕೊಂಡ ‘ಜ್ಞಾನ ದೀವಿಗೆ’ ಕಾರ್ಯಕ್ರಮದಲ್ಲಿ 10ನೇ ತರಗತಿಯ ಅಂಗವಿಕಲ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿ ಮಾತನಾಡಿದರು.</p>.<p>‘ಅಂಗವಿಕಲರ ಅಗತ್ಯ ಮತ್ತು ಸಮಸ್ಯೆ ಅರಿತು, ಸಹಾಯ ಮಾಡಬೇಕಿದೆ. ಕೆಲವರಿಗೆ ಹುಟ್ಟುವಾಗಲೇ ಶ್ರವಣದೋಷದಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಮಗು ಹುಟ್ಟಿದ ಕೆಲ ದಿನಗಳಲ್ಲೇ ಶ್ರವಣ ದೋಷ ಪರೀಕ್ಷೆ ನಡೆಸಬೇಕು. ಶ್ರವಣದೋಷದ ತೀವ್ರತೆ ಹೆಚ್ಚಿದಂತೆ ಅದರ ಚಿಕಿತ್ಸೆಯೂ ಸವಾಲಾಗುತ್ತಾ ಹೋಗುತ್ತದೆ. ಈ ಸಮಸ್ಯೆಯ ಪ್ರಮಾಣವನ್ನು ಅಳೆಯಲು ನಿರ್ದಿಷ್ಟ ಪರೀಕ್ಷೆಗಳಿವೆ’ ಎಂದರು.</p>.<p>‘ಶ್ರವಣ ದೋಷವನ್ನು ಬೇಗ ಗುರುತಿಸಿದಲ್ಲಿ ಔಷಧಗಳಿಂದಲೇ ಕೆಲವರಿಗೆ ವಾಸಿಮಾಡಬಹುದು. ಕೆಲವರಿಗೆ ಶ್ರವಣ ಸಾಧನಗಳ ಅಗತ್ಯ ಇರುತ್ತದೆ. ಇನ್ನೂ ಕೆಲವರಿಗೆ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಅನಿವಾರ್ಯವಾಗುತ್ತದೆ. ಈ ಮಾದರಿಯ ಶಸ್ತ್ರಚಿಕಿತ್ಸೆ ದುಬಾರಿ. ಇದರಿಂದಾಗಿ ಬಡ–ಮಧ್ಯಮ ವರ್ಗದವರಿಗೆ ಈ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದು ಕಷ್ಟ. ಕೇಂದ್ರ ಹಾಗೂ ರಾಜ್ಯ ಸರ್ಕಾರವು ವಿವಿಧ ಯೋಜನೆಗಳಡಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಈ ಶಸ್ತ್ರಚಿಕಿತ್ಸೆಗೆ ನೆರವು ನೀಡುತ್ತಿವೆ’ ಎಂದರು.</p>.<p>ರೋಟರಿ ಬೆಂಗಳೂರು ಪಶ್ಚಿಮ ವಲಯದ ಅಧ್ಯಕ್ಷ ಡಾ. ನಟೇಶ್ ಬಾಬು, ‘ಕೋವಿಡ್ನಿಂದಾಗಿ ಮಕ್ಕಳ ಶಿಕ್ಷಣಕ್ಕೆ ತೊಡಕಾಗಿದೆ. ಹಾಗಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪಠ್ಯ ಒಳಗೊಂಡ ಟ್ಯಾಬ್ ವಿತರಿಸಲಾಗುತ್ತಿದೆ. ಫಲಿತಾಂಶ ಕಡಿಮೆ ಇರುವ ಹಾಗೂ ದಾನಿಗಳು ಇಚ್ಛಿಸಿದ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ಕೆ ರಾಜ್ಯದ ವಿವಿಧೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>