ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪ್ರಕರಣ ದಾಖಲಿಸುವಾಗ ಇ.ಡಿಯು ಐಪಿಸಿ ಸೆಕ್ಷನ್ಗಳನ್ನು ಬಳಸುವಂತಿಲ್ಲ ಎಂದು ಪವನಾ ದಿಬ್ಬೂರು ಮತ್ತು ಇ.ಡಿ ಮಧ್ಯದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆ ತೀರ್ಪು ಶಿವಕುಮಾರ್ ಪ್ರಕರಣಕ್ಕೂ ಅನ್ವಯವಾಗುತ್ತದೆ’ ಎಂದರು.