ಫೆಬ್ರುವರಿ 29 ಮತ್ತು ಮಾರ್ಚ್ 1ರಂದು ಬೆಂಗಳೂರಿನ ಎಂಟು ಸ್ಥಳಗಳ ಮೇಲೆ ದಾಳಿಮಾಡಿ, ಶೋಧ ನಡೆಸಲಾಗಿದೆ. ವಿಜಯ್ ತಾತಾ, ಆರ್.ಎಸ್. ಚಂದ್ರಶೇಖರ್, ಮುನಿರಾಜು ಕೆ., ಡಿ. ನಾಗೇಂದ್ರ ಬಾಬು ಮತ್ತು ಮಂಜುನಾಥ್ ಬಿ.ಎಸ್. ಎಂಬುವವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆದಿದೆ. ಸಂಚಯ ಲ್ಯಾಂಡ್ ಆ್ಯಂಡ್ ಎಸ್ಟೇಟ್ಸ್ ಪ್ರೈವೇಟ್ ಲಿಮಿಟೆಡ್, ಬಿಸಿಸಿ ಕನ್ಸ್ಟ್ರಕ್ಷನ್ಸ್ ಪ್ರೈವೇಟ್ ಲಿಮಿಟೆಡ್, ಆಕಾಶ್ ಎಜುಕೇಷನ್ ಆ್ಯಂಡ್ ಡೆವಲಪ್ಮೆಂಟ್ ಟ್ರಸ್ಟ್ ಮತ್ತು ಎಸ್.ವಿ. ಕಾಂಕ್ರೀಟ್ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಕಚೇರಿಗಳಲ್ಲೂ ಶೋಧ ನಡೆಸಲಾಗಿದೆ ಎಂದು ಇ.ಡಿ ಹೇಳಿದೆ.