ಬೆಂಗಳೂರು: ‘ಅಶ್ವಮೇಧ ಯಾಗದಲ್ಲಿ ಕುದುರೆ ಬಿಟ್ಟಂತೆ ವಿರೋಧ ಪಕ್ಷದವರನ್ನು ಹಣಿಯಲು ಇ.ಡಿ (ಜಾರಿ ನಿರ್ದೇಶನಾಲಯ) ಎಂಬ ಕುದುರೆ ಬಿಡಲಾಗಿದೆ. ಪಂಜಾಬ್, ರಾಜಸ್ಥಾನ, ದೆಹಲಿ, ಬಿಹಾರ, ಮಹಾರಾಷ್ಟ್ರ, ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಇ.ಡಿ ಕಾರ್ಯಾಚರಣೆಗಳು ನಿರಂತರವಾಗಿ ನಡೆದಿರುವುದು ಇದಕ್ಕೆ ಸಾಕ್ಷಿ’ ಎಂದು ಪತ್ರಕರ್ತ ಕೃಷ್ಣಪ್ರಸಾದ್ ಅಭಿಪ್ರಾಯಪಟ್ಟರು.