ಪ್ರಾಥಮಿಕ ತನಿಖೆಯಿಂದ ಇದು ಸಾಬೀತುಗೊಂಡ ನಂತರ ಇಲಾಖೆಯು, ಅವರನ್ನು ಅಮಾನತುಗೊಳಿಸಿತ್ತು. ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಲಾಗಿತ್ತು. ನಿವೃತ್ತ ನ್ಯಾಯಮೂರ್ತಿ ರಾಧಾಕೃಷ್ಣ ಹೊಳ್ಳ ನೇತೃತ್ವದಲ್ಲಿ ತನಿಖಾ ಸಮಿತಿಯನ್ನೂ ರಚಿಸಲಾಗಿತ್ತು. ನಾಲ್ಕು ವರ್ಷಗಳ ನಂತರ ಅದೇ ಹುದ್ದೆಗೆ ಪ್ರಕಾಶ್ ಅವರನ್ನು ಸರ್ಕಾರ ನೇಮಕ ಮಾಡಿದೆ. ಸರ್ಕಾರದ ಈ ನಡೆಯನ್ನು ಪ್ರಶ್ನಿಸಿರುವ ಆರ್ಟಿಇ ವಿದ್ಯಾರ್ಥಿಗಳು, ಪೋಷಕರ ಸಂಘದ ಪ್ರಧಾನ ಕಾರ್ಯದರ್ಶಿ ಯೋಗಾನಂದ, ಈ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.