<p><strong>ಯಲಹಂಕ:</strong> ‘ಮಕ್ಕಳ ಭವಿಷ್ಯ ಉಜ್ವಲವಾಗಬೇಕಾದರೆ ಶಿಕ್ಷಣವೇ ಪ್ರಮುಖ ಸೂತ್ರವಾಗಿದೆ. ಆದ್ದರಿಂದ ಎಲ್ಲ ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಮುಂದಾಗಬೇಕು’ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.</p>.<p>ಬ್ಯಾಟರಾಯನಪುರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಬಿಜಿ ಸ್ವಯಂಸೇವಕರ ಸಂಘದ ಆಶ್ರಯದಲ್ಲಿ ಸಹಕಾರನಗರದ ಗಣೇಶ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ನಮ್ಮೂರ ಹೆಮ್ಮೆ-2026 ಕಾರ್ಯಕ್ರಮದಲ್ಲಿ ಕೊಡಿಗೇಹಳ್ಳಿ ಹಾಗೂ ರಾಜೀವ್ಗಾಂಧಿನಗರ ವಾರ್ಡ್ ವ್ಯಾಪ್ತಿಯಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ 650ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ, ಸನ್ಮಾನಿಸಿ ಅವರು ಮಾತನಾಡಿದರು.</p>.<p>‘ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಉತ್ತೇಜಿಸುವುದರ ಜೊತೆಗೆ ಇತರ ಮಕ್ಕಳಿಗೂ ಸ್ಫೂರ್ತಿಯಾಗುವ ಉದ್ದೇಶದಿಂದ ನಮ್ಮೂರ ಹೆಮ್ಮೆ ಕಾರ್ಯಕ್ರಮವನ್ನು ಐದು ವರ್ಷಗಳಿಂದ ನಡೆಸಲಾಗುತ್ತಿದೆ. ಈ ವರ್ಷ ವಿವಿಧ ವಾರ್ಡ್ಗಳಲ್ಲಿ ಕನಿಷ್ಠ 4 ಸಾವಿರ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವ ಉದ್ದೇಶ ಇದೆ’ ಎಂದು ಮಾಹಿತಿ ನೀಡಿದರು. </p>.<p>ಸಾಮಾಜಿಕ ಕಾರ್ಯಕರ್ತೆ ಮೀನಾಕ್ಷಿ ಕೃಷ್ಣ ಬೈರೇಗೌಡ ಮಾತನಾಡಿ, ‘ನಮ್ಮ ಕ್ಷೇತ್ರದ ಹಲವು ವಿದ್ಯಾರ್ಥಿಗಳು ಇಂದು ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಯುರೋಪ್, ಅಮೆರಿಕ, ಜರ್ಮನಿ, ಜಪಾನ್ ಹಾಗೂ ರಷ್ಯಾದಲ್ಲೂ ನಮ್ಮ ಮಕ್ಕಳು ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಆಗಿದೆ’ ಎಂದರು. </p>.<p>ಇದೇ ಸಂದರ್ಭದಲ್ಲಿ ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಸಲುವಾಗಿ ಆಯೋಜಿಸಿದ್ದ ʼನಮ್ಮ ಯಂಗ್ ಸ್ಟಾರ್ʼ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನೃತ್ಯ ಮತ್ತು ಗಾಯನಕ್ಕೆ ಸಂಬಂಧಿಸಿದಂತೆ 24 ತಂಡಗಳು ಭಾಗವಹಿಸಿ ಪ್ರದರ್ಶನ ನೀಡಿದವು. ಇದರಲ್ಲಿ ಅಂತಿಮವಾಗಿ 5 ತಂಡಗಳು ಆಯ್ಕೆಯಾಗಿ, ಮುಂದಿನ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ಪ್ರವೇಶ ಪಡೆದವು.</p>.<p>ಕಾಂಗ್ರೆಸ್ ಮುಖಂಡರಾದ ಎನ್.ಎನ್. ಶ್ರೀನಿವಾಸಯ್ಯ, ಎಂ. ಜಯಗೋಪಾಲಗೌಡ, ವಿ. ಹರಿ, ವೆಂಕಟಸ್ವಾಮಿ, ಕೆ.ಆರ್. ರಾಜು, ಹನುಮಂತಿ, ಕೆ. ಮಂಜುನಾಥ್, ಕೆ. ದಿಲೀಪ್ಕುಮಾರ್, ಹರೀಶ್ ಜೋಡಿದಾರ್, ಶಾಂತಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ‘ಮಕ್ಕಳ ಭವಿಷ್ಯ ಉಜ್ವಲವಾಗಬೇಕಾದರೆ ಶಿಕ್ಷಣವೇ ಪ್ರಮುಖ ಸೂತ್ರವಾಗಿದೆ. ಆದ್ದರಿಂದ ಎಲ್ಲ ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಮುಂದಾಗಬೇಕು’ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.</p>.<p>ಬ್ಯಾಟರಾಯನಪುರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಬಿಜಿ ಸ್ವಯಂಸೇವಕರ ಸಂಘದ ಆಶ್ರಯದಲ್ಲಿ ಸಹಕಾರನಗರದ ಗಣೇಶ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ನಮ್ಮೂರ ಹೆಮ್ಮೆ-2026 ಕಾರ್ಯಕ್ರಮದಲ್ಲಿ ಕೊಡಿಗೇಹಳ್ಳಿ ಹಾಗೂ ರಾಜೀವ್ಗಾಂಧಿನಗರ ವಾರ್ಡ್ ವ್ಯಾಪ್ತಿಯಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ 650ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ, ಸನ್ಮಾನಿಸಿ ಅವರು ಮಾತನಾಡಿದರು.</p>.<p>‘ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಉತ್ತೇಜಿಸುವುದರ ಜೊತೆಗೆ ಇತರ ಮಕ್ಕಳಿಗೂ ಸ್ಫೂರ್ತಿಯಾಗುವ ಉದ್ದೇಶದಿಂದ ನಮ್ಮೂರ ಹೆಮ್ಮೆ ಕಾರ್ಯಕ್ರಮವನ್ನು ಐದು ವರ್ಷಗಳಿಂದ ನಡೆಸಲಾಗುತ್ತಿದೆ. ಈ ವರ್ಷ ವಿವಿಧ ವಾರ್ಡ್ಗಳಲ್ಲಿ ಕನಿಷ್ಠ 4 ಸಾವಿರ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವ ಉದ್ದೇಶ ಇದೆ’ ಎಂದು ಮಾಹಿತಿ ನೀಡಿದರು. </p>.<p>ಸಾಮಾಜಿಕ ಕಾರ್ಯಕರ್ತೆ ಮೀನಾಕ್ಷಿ ಕೃಷ್ಣ ಬೈರೇಗೌಡ ಮಾತನಾಡಿ, ‘ನಮ್ಮ ಕ್ಷೇತ್ರದ ಹಲವು ವಿದ್ಯಾರ್ಥಿಗಳು ಇಂದು ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಯುರೋಪ್, ಅಮೆರಿಕ, ಜರ್ಮನಿ, ಜಪಾನ್ ಹಾಗೂ ರಷ್ಯಾದಲ್ಲೂ ನಮ್ಮ ಮಕ್ಕಳು ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ ಆಗಿದೆ’ ಎಂದರು. </p>.<p>ಇದೇ ಸಂದರ್ಭದಲ್ಲಿ ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಸಲುವಾಗಿ ಆಯೋಜಿಸಿದ್ದ ʼನಮ್ಮ ಯಂಗ್ ಸ್ಟಾರ್ʼ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ನೃತ್ಯ ಮತ್ತು ಗಾಯನಕ್ಕೆ ಸಂಬಂಧಿಸಿದಂತೆ 24 ತಂಡಗಳು ಭಾಗವಹಿಸಿ ಪ್ರದರ್ಶನ ನೀಡಿದವು. ಇದರಲ್ಲಿ ಅಂತಿಮವಾಗಿ 5 ತಂಡಗಳು ಆಯ್ಕೆಯಾಗಿ, ಮುಂದಿನ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ಪ್ರವೇಶ ಪಡೆದವು.</p>.<p>ಕಾಂಗ್ರೆಸ್ ಮುಖಂಡರಾದ ಎನ್.ಎನ್. ಶ್ರೀನಿವಾಸಯ್ಯ, ಎಂ. ಜಯಗೋಪಾಲಗೌಡ, ವಿ. ಹರಿ, ವೆಂಕಟಸ್ವಾಮಿ, ಕೆ.ಆರ್. ರಾಜು, ಹನುಮಂತಿ, ಕೆ. ಮಂಜುನಾಥ್, ಕೆ. ದಿಲೀಪ್ಕುಮಾರ್, ಹರೀಶ್ ಜೋಡಿದಾರ್, ಶಾಂತಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>